HomeGadag Newsವಿದ್ಯಾರ್ಥಿಗಳೊಂದಿಗೆ ಪರಿಸರ ಸಂರಕ್ಷಣೆಯ ಅಭಿಯಾನ

ವಿದ್ಯಾರ್ಥಿಗಳೊಂದಿಗೆ ಪರಿಸರ ಸಂರಕ್ಷಣೆಯ ಅಭಿಯಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆ ಹಾಗೂ ವಸತಿ ಗೃಹದ ಆವರಣದಲ್ಲಿ ಕೆಪಿಜಿ ಶಾಲೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸುಮಾರು 200 ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಮುಂದಿನ ಪೀಳಿಗೆಗೂ ಉತ್ತಮ ಪರಿಸರವನ್ನು ಉಳಿಸಬೇಕಾದರೆ ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಹೇಳಿದರು. “ಪರಿಸರಕ್ಕಾಗಿ ನಾವು, ನಮಗಾಗಿ ಪರಿಸರ” ಎಂಬ ಸಂದೇಶದೊಂದಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ನಾಗರಾಜ ಕೊಟಗಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಜಿ. ಗಿರೀಶ್, ವಿಎಸ್‌ಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ್, ಬಣಕಾರ ಕೊಟ್ರೇಶ್, ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ, ಕಿರಣ್, ಚೇತನ್, ಚೌಡಪ್ಪ, ಕೊಟ್ರೇಶ್, ಗಣೇಶ್, ಹೈಸ್ಕೂಲ್‌ನ ಪ್ರಶಾಂತ ಹಾಗೂ ಗಡ್ಡಿ ಚನ್ನಬಸವ ಸೇರಿದಂತೆ ಹಲವರು ಭಾಗವಹಿಸಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img