HomeKarnataka Newsಕೊಪ್ಪಳದಲ್ಲಿ ದುರಂತ: ವ್ಯಸನ ಮುಕ್ತ ಕೇಂದ್ರದಲ್ಲಿದ್ದ ಪೊಲೀಸ್ ಪೇದೆ ನೇಣಿಗೆ ಶರಣು

ಕೊಪ್ಪಳದಲ್ಲಿ ದುರಂತ: ವ್ಯಸನ ಮುಕ್ತ ಕೇಂದ್ರದಲ್ಲಿದ್ದ ಪೊಲೀಸ್ ಪೇದೆ ನೇಣಿಗೆ ಶರಣು

For Dai;y Updates Join Our whatsapp Group

ಕೊಪ್ಪಳ: ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ.

ಮೃತರನ್ನು ಶರಣಪ್ಪ ಉಪ್ಪಾರ (49) ಎಂದು ಗುರುತಿಸಲಾಗಿದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ಯ ವ್ಯಸನಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಶರಣಪ್ಪ ಅವರು ವ್ಯಸನ ಮುಕ್ತ ಕೇಂದ್ರದಿಂದ ತಮ್ಮನ್ನು ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಆದರೆ ಮನೆಗೆ ಕರೆದುಕೊಂಡು ಹೋಗದಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img