HomeChikkamagaluruಸಾಲ ಕೊಡಿಸುವ ನೆಪದಲ್ಲಿ ಬ್ಯಾಂಕ್ ಖಾತೆ ತೆರೆಯಿಸಿ ಕೋಟಿ ಕೋಟಿ ವ್ಯವಹಾರ: 6 ಮಂದಿ ಅರೆಸ್ಟ್

ಸಾಲ ಕೊಡಿಸುವ ನೆಪದಲ್ಲಿ ಬ್ಯಾಂಕ್ ಖಾತೆ ತೆರೆಯಿಸಿ ಕೋಟಿ ಕೋಟಿ ವ್ಯವಹಾರ: 6 ಮಂದಿ ಅರೆಸ್ಟ್

For Dai;y Updates Join Our whatsapp Group

ಚಿಕ್ಕಮಗಳೂರು: ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ ಅವರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಕೋಟಿ ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ನಡೆಸಿದ ಬೃಹತ್ ಜಾಲವನ್ನು ಚಿಕ್ಕಮಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿ, ಸ್ಥಳೀಯ ಮಧ್ಯವರ್ತಿಗಳು ಹಾಗೂ ಪ್ರಭಾವಿಗಳ ಪಾತ್ರದ ಬಗ್ಗೆ ತನಿಖೆ ತೀವ್ರಗೊಂಡಿದೆ.

ಆಧಾರ್ ಹಾಗೂ ವೈಯಕ್ತಿಕ ದಾಖಲೆಗಳನ್ನು ಪಡೆದು 2022-23ರ ಅವಧಿಯಲ್ಲಿ ಹಲವು ಖಾಸಗಿ ಬ್ಯಾಂಕ್‌ಗಳಲ್ಲಿ ನೂರಾರು ಖಾತೆಗಳನ್ನು ತೆರೆಯಲಾಗಿತ್ತು. ಈ ಖಾತೆಗಳ ಮೂಲಕ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಮತ್ತು ಇತರೆ ಅನುಮಾನಾಸ್ಪದ ಹಣಕಾಸು ವ್ಯವಹಾರಗಳಿಗೆ ಕೋಟ್ಯಂತರ ರೂಪಾಯಿ ವರ್ಗಾವಣೆಯಾಗಿರುವ ಶಂಕೆ ವ್ಯಕ್ತವಾಗಿದೆ. ಒಂದೊಂದು ಖಾತೆಯಲ್ಲೂ 20ರಿಂದ 30 ಲಕ್ಷ ರೂಪಾಯಿವರೆಗೆ ವಹಿವಾಟು ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಶಂಕರಪುರ ವಾರ್ಡ್‌ನ ಜೆಡಿಎಸ್ ನಗರಸಭೆ ಸದಸ್ಯ ಗೋಪಿ ಹೆಸರು ಕೇಳಿಬಂದಿದ್ದು, 50ಕ್ಕೂ ಹೆಚ್ಚು ಖಾತೆಗಳನ್ನು ಮಾಡಿಸಿಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ಬೆಳವಣಿಗೆಯಿಂದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರಕರಣದ ಹಿಂದೆ ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಜಾಲ ಇರುವ ಶಂಕೆ ವ್ಯಕ್ತಪಡಿಸಿ, ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ED) ಮೂಲಕ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಏಳು ಮಂದಿಯ ವಿರುದ್ಧ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಆರೋಪಿಗಳನ್ನು ಬಂಧಿಸಲಾಗಿದೆ. ಜಾಲದಲ್ಲಿ ಭಾಗಿಯಾಗಿರುವ ಇತರರು ಹಾಗೂ ಬ್ಯಾಂಕ್ ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img