HomeKarnataka Newsಇನ್ಮುಂದೆ ಪಿಯುಸಿ ಉಪನ್ಯಾಸಕರಿಗೆ 9 ಮತ್ತು 10ನೇ ತರಗತಿಗೂ ಪಾಠ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ

ಇನ್ಮುಂದೆ ಪಿಯುಸಿ ಉಪನ್ಯಾಸಕರಿಗೆ 9 ಮತ್ತು 10ನೇ ತರಗತಿಗೂ ಪಾಠ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಪಿಯುಸಿ ಉಪನ್ಯಾಸಕರ ಕರ್ತವ್ಯ ವ್ಯಾಪ್ತಿಗೆ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ನು ಮುಂದೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಪಾಠ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ 2013ರ ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.

ಹೊಸ ನಿಯಮದ ಪ್ರಕಾರ, ನೇರ ನೇಮಕಾತಿ ಹಾಗೂ ಬಡ್ತಿಯ ಮೂಲಕ ನೇಮಕಗೊಂಡಿರುವ ಎಲ್ಲಾ ಪಿಯುಸಿ ಉಪನ್ಯಾಸಕರು ಪ್ರೌಢಶಾಲೆಯ 9 ಮತ್ತು 10ನೇ ತರಗತಿಗಳಿಗೂ ಬೋಧನೆ ಮಾಡುವುದು ಕಡ್ಡಾಯವಾಗಲಿದೆ. ಈ ತಿದ್ದುಪಡಿ ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದರ ಜೊತೆಗೆ ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿದೆ. ಒಟ್ಟು 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರಡು ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,905 ಹುದ್ದೆಗಳು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ 8,095 ಹುದ್ದೆಗಳು ಮೀಸಲಿರಿಸಲ್ಪಟ್ಟಿವೆ. ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img