ವಿಜಯಸಾಕ್ಷಿ ಸುದ್ದಿ, ಗದಗ: ವೈದ್ಯರು ಕೇವಲ ರೋಗಕ್ಕೆ ಚಿಕಿತ್ಸೆ ನೀಡುವವರಲ್ಲ, ರೋಗಿಗಳ ಬದುಕಿಗೆ ಹೊಸ ಭರವಸೆ ನೀಡುವ ದೇವತಾಸಮಾನ ವ್ಯಕ್ತಿತ್ವಗಳಾಗಿದ್ದಾರೆ ಎಂದು ಜೈಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ಗದಗ ಅಧ್ಯಕ್ಷೆ ಶ್ರೀಮತಿ ಹೇಮ ಪೊಂಗೋಲಿಯ ಹೇಳಿದರು.
ವೈದ್ಯರ ದಿನಾಚರಣೆ ಅಂಗವಾಗಿ ಜೈಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ವತಿಯಿಂದ ಸಮಾಜಸೇವೆ ಹಾಗೂ ಮಹಿಳಾ ಆರೋಗ್ಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಖ್ಯಾತ ಸ್ತ್ರೀರೋಗ ತಜ್ಞೆ, ಎಂಡೋಸ್ಕೋಪಿ ಶಸ್ತ್ರಚಿಕಿತ್ಸಕಿ ಹಾಗೂ ಸ್ಪರ್ಶ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥೆ ಡಾ. ಪ್ರಭಾ ಡಿ. ದೇಸಾಯಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಕಳೆದ ಎರಡು ದಶಕಗಳಿಂದ ಮಹಿಳಾ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಭಾ ದೇಸಾಯಿ ಅವರು ಅನೇಕ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ‘ಸುವರ್ಣ ಸಾಧಕಿ–2026’ ಪ್ರಶಸ್ತಿಗೂ ಆಯ್ಕೆಯಾಗಿದ್ದಾರೆ. ಗದಗ ಆಬ್ಸ್ಟೆಟ್ರಿಕ್ ಮತ್ತು ಗೈನಕಾಲಜಿಕಲ್ ಸೊಸೈಟಿ (GOGS) ಅಧ್ಯಕ್ಷೆಯಾಗಿ ಎರಡು ಬಾರಿ ಸೇವೆ ಸಲ್ಲಿಸಿರುವ ಅವರು ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಶಂಸಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಸ್ಥಾವರಮಠ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ಶ್ರೀಮತಿ ನಿರ್ಮಲಾ ಪಾಟೀಲ ಹಾಗೂ ಶ್ರೀಮತಿ ಆಶಾ ಪಟ್ಟಣಶೆಟ್ಟಿ ಪರಿಚಯಿಸಿದರು. ಖಜಾಂಚಿ ಅನುರಾಧ ಅಮಾತ್ಯಗೌಡರ ಸ್ವಾಗತಿಸಿದರು. ಸದಸ್ಯೆಯರಾದ ರೇಖಾ ರೊಟ್ಟಿ ಮತ್ತು ಶಶಿಕಲಾ ಮಾಲಿಪಾಟೀಲ ಉಪಸ್ಥಿತರಿದ್ದರು.



