HomeKarnataka Newsಕೃಷಿಗೆ ನೀರು ಬಳಸಬೇಡಿ, ಕುಡಿಯಲು ಮಾತ್ರ ನೀರು ಬಿಡಲಾಗಿದೆ: ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಕೃಷಿಗೆ ನೀರು ಬಳಸಬೇಡಿ, ಕುಡಿಯಲು ಮಾತ್ರ ನೀರು ಬಿಡಲಾಗಿದೆ: ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಬೇಕು, ಕೃಷಿಗೆ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರಿಗೆ ಮತ್ತೊಮ್ಮೆ ಮನವಿ ಹಾಗೂ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಸೇರಿದಂತೆ ಯಾವುದೇ ಜಿಲ್ಲೆಯ ರೈತರು ಸರ್ಕಾರ ಬಿಡುಗಡೆ ಮಾಡಿರುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಎಂದು ಸ್ಪಷ್ಟಪಡಿಸಿದರು.

“ಕುಡಿಯುವ ನೀರಿನ ಅಗತ್ಯಕ್ಕಾಗಿ ಮಾತ್ರ ನೀರು ಬಿಡುಗಡೆ ಮಾಡಿದ್ದೇವೆ. ಜಲಾಶಯಗಳಲ್ಲಿನ ನೀರಿನ ಲಭ್ಯತೆ ಗಮನದಲ್ಲಿಟ್ಟುಕೊಂಡು ಮಾತ್ರ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಬಿತ್ತನೆ ಮಾಡಿ, ನಾಟಿ ಮಾಡಿ ನಂತರ ನೀರು ಬಿಡುವಂತೆ ನನ್ನ ಮೇಲೆ ಒತ್ತಡ ತರಬೇಡಿ” ಎಂದು ಸಿಎಂ ಹೇಳಿದರು.

ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾದ ಬಳಿಕವೇ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಡ್ಯಾಂಗಳು ಭರ್ತಿಯಾದರೆ ರೈತರಿಗೆ ಅಗತ್ಯ ಪ್ರಮಾಣದಲ್ಲಿ ನೀರು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ತಮಿಳುನಾಡು ಕಾವೇರಿ ನೀರು ಬಿಡುಗಡೆಗೆ ಒತ್ತಡ ಹೇರುತ್ತಿರುವ ವಿಚಾರ ಪ್ರಸ್ತಾಪಿಸಿದ ಸಿಎಂ, ಈ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಕಾವೇರಿ ನೀರಿನ ವಿಚಾರ ನಮ್ಮ ಹಕ್ಕಿನ ಪ್ರಶ್ನೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಯಲ್ಲಿ ರಾಜ್ಯದ ಪರವಾಗಿ ನಮ್ಮ ವಾದವನ್ನು ಮಂಡಿಸುತ್ತೇವೆ. ಈ ಬಗ್ಗೆ ದೆಹಲಿಗೆ ತೆರಳಿ ರಾಜ್ಯದ ಸಂಸದರೊಂದಿಗೂ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.

ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲವಾಗುವ ಯೋಜನೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img