HomeEntertainment'ಐಸಿಯು, ಸರ್ಜರಿ, ಚಾಂಪಿಯನ್ ಕೂಡ ಸೋಲುತ್ತಾನೆ'... ಅಮಿತಾಭ್ ಬಚ್ಚನ್ ನಿಗೂಢ ಪೋಸ್ಟ್‌ಗೆ ಅಭಿಮಾನಿಗಳಲ್ಲಿ ಆತಂಕ

‘ಐಸಿಯು, ಸರ್ಜರಿ, ಚಾಂಪಿಯನ್ ಕೂಡ ಸೋಲುತ್ತಾನೆ’… ಅಮಿತಾಭ್ ಬಚ್ಚನ್ ನಿಗೂಢ ಪೋಸ್ಟ್‌ಗೆ ಅಭಿಮಾನಿಗಳಲ್ಲಿ ಆತಂಕ

For Dai;y Updates Join Our whatsapp Group

ಮುಂಬೈ: ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಹಂಚಿಕೊಂಡಿರುವ ನಿಗೂಢ ಬ್ಲಾಗ್ ಮತ್ತು ಎಕ್ಸ್ ಪೋಸ್ಟ್‌ಗಳು ಅವರ ಆರೋಗ್ಯದ ಬಗ್ಗೆ ಹೊಸ ಅನುಮಾನಗಳಿಗೆ ಕಾರಣವಾಗಿವೆ. ಶಸ್ತ್ರಚಿಕಿತ್ಸೆ, ಐಸಿಯು ಹಾಗೂ ಚೇತರಿಕೆಯ ಕಠಿಣ ಹಂತಗಳ ಬಗ್ಗೆ ಬರೆದಿರುವ ಬರಹಗಳು ಅಭಿಮಾನಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಬ್ಲಾಗ್‌ನಲ್ಲಿ ಆಸ್ಪತ್ರೆಯಲ್ಲಿನ ಅನುಭವವನ್ನು ವಿವರಿಸಿರುವ ಅಮಿತಾಭ್, ಶಸ್ತ್ರಚಿಕಿತ್ಸೆಯ ಬಳಿಕ ಮನೆಗೆ ಮರಳುವ ಅವಧಿಯು ದೈಹಿಕ ಮತ್ತು ಮಾನಸಿಕವಾಗಿ ಅತ್ಯಂತ ಸವಾಲಿನದ್ದು ಎಂದು ಹೇಳಿದ್ದಾರೆ. ಆದರೆ ಈ ಅನುಭವ ತಮ್ಮದೇ ಆರೋಗ್ಯದ ಕುರಿತದ್ದೇ ಎಂಬುದನ್ನು ಅವರು ಎಲ್ಲಿಯೂ ಸ್ಪಷ್ಟಪಡಿಸಿಲ್ಲ.”ಆಸ್ಪತ್ರೆಯಿಂದ ಮನೆಗೆ ಮರಳಿದ ಬಳಿಕದ ದಿನಗಳು ಜೀವನದ ಅತ್ಯಂತ ಕಷ್ಟದ ಹಂತ. ಚಾಂಪಿಯನ್‌ಗಳೂ ಕೆಲವೊಮ್ಮೆ ಸೋಲನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಆದರೆ ಧೈರ್ಯದಿಂದ ಹೋರಾಡುವವರೇ ಕೊನೆಗೂ ಗೆಲ್ಲುತ್ತಾರೆ” ಎಂದು ಅವರು ಬರೆದಿದ್ದಾರೆ.

ಇದರ ಬೆನ್ನಲ್ಲೇ ಎಕ್ಸ್‌ನಲ್ಲಿ “The game is over… but the work goes on” (ಆಟ ಮುಗಿದಿದೆ, ಆದರೆ ಕೆಲಸ ಇನ್ನೂ ಮುಂದುವರಿಯುತ್ತಿದೆ) ಎಂದು ಪೋಸ್ಟ್ ಮಾಡಿರುವುದು ಮತ್ತಷ್ಟು ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದೆ.

ಕಳೆದ ಕೆಲವು ತಿಂಗಳುಗಳ ಹಿಂದೆ ಕೂಡ ಅಮಿತಾಭ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿಗಳು ಹರಡಿದ್ದರೂ, ಅದು ಸಾಮಾನ್ಯ ಆರೋಗ್ಯ ತಪಾಸಣೆ ಮಾತ್ರ ಎಂದು ಬಳಿಕ ಸ್ಪಷ್ಟವಾಗಿತ್ತು. ಸದ್ಯ ಅವರು ‘ಕೌನ್ ಬನೇಗಾ ಕರೋಡ್‌ಪತಿ’ ಹೊಸ ಸೀಸನ್ ಹಾಗೂ ‘ಕಲ್ಕಿ 2898 ಎಡಿ’ ಸೀಕ್ವೆಲ್‌ಗಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಇನ್ನೂ ಹೊರಬಂದಿಲ್ಲ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img