HomeKarnataka Newsಬರ ನಿರ್ವಹಣೆಗೆ ಸರ್ಕಾರ ಸಂಪೂರ್ಣ ಸಜ್ಜು; ಶಾಸಕರಿಗೆ ₹1 ಕೋಟಿ, ಜಿಲ್ಲೆಗಳಿಗೆ ₹5 ಕೋಟಿ ಅನುದಾನ:...

ಬರ ನಿರ್ವಹಣೆಗೆ ಸರ್ಕಾರ ಸಂಪೂರ್ಣ ಸಜ್ಜು; ಶಾಸಕರಿಗೆ ₹1 ಕೋಟಿ, ಜಿಲ್ಲೆಗಳಿಗೆ ₹5 ಕೋಟಿ ಅನುದಾನ: ಡಿಸಿಎಂ ಪರಮೇಶ್ವರ್

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಅಗತ್ಯ ಅನುದಾನದ ಕೊರತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆಗೆ ಈಗಾಗಲೇ ಪ್ರತಿ ಶಾಸಕರಿಗೆ ₹1 ಕೋಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ರಾಜ್ಯದ ಪ್ರತಿ ಜಿಲ್ಲೆಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇದರೊಂದಿಗೆ ವಿವಿಧ ಪಿಡಿ (PD) ಖಾತೆಗಳಲ್ಲಿ ಈಗಾಗಲೇ ₹329 ಕೋಟಿ ಲಭ್ಯವಿದ್ದು, ಸರ್ಕಾರಕ್ಕೆ ಯಾವುದೇ ಹಣಕಾಸಿನ ಕೊರತೆಯಿಲ್ಲ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಡಿಸಿಎಂ ಪರಮೇಶ್ವರ್ ಮಾತನಾಡಿ, ಮೈಸೂರು ಹಾಗೂ ಬೆಂಗಳೂರು ವಿಭಾಗಗಳ ಬರ ಪರಿಸ್ಥಿತಿಯ ಪ್ರಗತಿ ಪರಿಶೀಲನೆ ಇನ್ನೂ ಬಾಕಿಯಿದೆ. ಜುಲೈ 25ರಂದು ಮುಖ್ಯಮಂತ್ರಿ ಅವರೊಂದಿಗೆ ಬೆಂಗಳೂರು ವಿಭಾಗದ ಪರಿಶೀಲನಾ ಸಭೆ ನಡೆಸಲಾಗುವುದು. ಬಳಿಕ ಮೈಸೂರು ವಿಭಾಗದಲ್ಲೂ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿಯ ಸಮಗ್ರ ಚಿತ್ರಣ ಪಡೆದು ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಬರದಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅವರು ಭರವಸೆ ನೀಡಿದರು.

ಉದ್ಯೋಗದ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರು ಗುಳೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ವಿಬಿ-ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ತಕ್ಷಣ ಉದ್ಯೋಗಾವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು. ಕಾಮಗಾರಿಗಳನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ನೆರವು ಕುರಿತು ಪ್ರತಿಕ್ರಿಯಿಸಿದ ಅವರು, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನೆರವು ಕೋರಲಾಗಿದೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮನವಿಯನ್ನು ಸ್ವೀಕರಿಸುವ ಸಾಧ್ಯತೆ ಇದ್ದು, ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ ಬಳಿಕ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img