HomeIndia Newsನೀಟ್ ವಿವಾದ: ಸರ್ಕಾರದ ಜೊತೆ ಮಾತುಕತೆಗೆ CJP ಸಿದ್ಧ; ಇಂದು ನಡೆಯಲಿದೆ ಮಹತ್ವದ ಸಭೆ!

ನೀಟ್ ವಿವಾದ: ಸರ್ಕಾರದ ಜೊತೆ ಮಾತುಕತೆಗೆ CJP ಸಿದ್ಧ; ಇಂದು ನಡೆಯಲಿದೆ ಮಹತ್ವದ ಸಭೆ!

For Dai;y Updates Join Our whatsapp Group

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವೆ ಇಂದು ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ.

ಸರ್ಕಾರದೊಂದಿಗೆ ತಟಸ್ಥ ಸ್ಥಳದಲ್ಲಿ ಚರ್ಚೆ ನಡೆಸುವಂತೆ ಸಿಜೆಪಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ, ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, “ಸರ್ಕಾರದೊಂದಿಗೆ ಚರ್ಚೆಗೆ ನಮ್ಮನ್ನು ಆಹ್ವಾನಿಸಲಾಗಿದೆ. ನಮ್ಮ ಮನವಿಯಂತೆ ತಟಸ್ಥ ಸ್ಥಳದಲ್ಲಿ ಸಭೆ ನಡೆಸಲು ಸರ್ಕಾರ ಒಪ್ಪಿಕೊಂಡಿರುವುದು ಸಂತಸ ತಂದಿದೆ. ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾವನ್ನು ಸಭೆಯ ಸ್ಥಳವಾಗಿ ಆಯ್ಕೆ ಮಾಡಲಾಗಿದೆ” ಎಂದು ಹೇಳಿದರು.

ಸಿಜೆಪಿ ವಕ್ತಾರೆ ವೈಷ್ಣವಿ ಗೌರ್ ಮಾತನಾಡಿ, “ನಾವು ಮೊದಲಿನಿಂದಲೂ ಮುಂದಿಟ್ಟಿರುವ ನಾಲ್ಕು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಿದ್ದೇವೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ, ನಿರಪರಾಧಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಚರ್ಚಿಸಲಾಗುವುದು” ಎಂದು ತಿಳಿಸಿದ್ದಾರೆ.

ಈ ಹಿಂದೆ ಜುಲೈ 20ರಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸರ್ಕಾರದ ಪರವಾಗಿ ಸಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಸಿಜೆಪಿ ಪ್ರತಿನಿಧಿಗಳಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಜೆ.ಪಿ. ನಡ್ಡಾ ಅವರ ಅಧಿಕೃತ ನಿವಾಸದಲ್ಲಿ ಭೇಟಿ ನೀಡಿ ತಮ್ಮ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಹಲವು ವಿಚಾರಗಳನ್ನು ಖಂಡಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳ ನಡುವೆ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದುಕೊಂಡಿದೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಚರ್ಚೆಯ ಫಲಿತಾಂಶದ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img