HomeGadag Newsಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಪ್ರಗತಿ ಸಾಧ್ಯ: ಮಿಥುನ ಜಿ. ಪಾಟೀಲ

ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಪ್ರಗತಿ ಸಾಧ್ಯ: ಮಿಥುನ ಜಿ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯೇ ದೇಶದ ಪ್ರಗತಿಗೆ ಭದ್ರ ಅಡಿಪಾಯವಾಗಿದ್ದು, ಜನಪರ ಯೋಜನೆಗಳ ಮೂಲಕ ಗ್ರಾಮೀಣ ಜನರ ಬದುಕನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ರೋಣ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.

ಡಂಬಳ ಹೋಬಳಿಯ ಬರದೂರು ಗ್ರಾಮದಲ್ಲಿ ಕಾಶೀಲಿಂಗೇಶ್ವರ ದೇವಸ್ಥಾನ ಸಮೀಪದ ಬೆಳಗಟ್ಟಿಗೆ ಸಂಪರ್ಕಿಸುವ ರಸ್ತೆ ಹಾಗೂ ಎಸ್‌ಸಿ ಕಾಲೋನಿಯಲ್ಲಿ ₹75 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಬಳಿಕ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಡೆಸ್ಕ್, ಶಾಲಾ ಬ್ಯಾಗ್ ಹಾಗೂ ನೋಟ್‌ಬುಕ್ ವಿತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ವಾರ್ಷಿಕ ₹56 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಈ ಯೋಜನೆಗಳು ಜನಸಾಮಾನ್ಯರ ಜೀವನಮಟ್ಟ ಸುಧಾರಿಸಲು ನೆರವಾಗುತ್ತಿವೆ ಎಂದು ಹೇಳಿದರು.

ಮುಂಡರಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆ ಗ್ರಾಮೀಣ ಅಭಿವೃದ್ಧಿಗೆ ಬಲ ನೀಡಿದ್ದು, ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ಮತ್ತು ಸಂಪನ್ಮೂಲ ದೊರೆತಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ವೇಗ ಪಡೆಯುತ್ತದೆ ಎಂದು ಹೇಳಿದರು.

ಮುಖಂಡ ಪ್ರಕಾಶ ಸಜ್ಜನ ಮಾತನಾಡಿ, ಬರದೂರು ಗ್ರಾಮದ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲ ವಿಶೇಷ ಅನುದಾನ ಒದಗಿಸಿದ್ದು, ರಸ್ತೆ, ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳ ಮೂಲಕ ರೈತರ ಹಿತ ಕಾಪಾಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಒ ವಿಜಯಕುಮಾರ ಬೆಣ್ಣಿ, ಅಭಿಯಂತರರಾದ ನಾಗರಾಜ, ನಿಂಗಪ್ಪ ತೋಟಪ್ಪನವರ, ಗೌಸುಸಾಬ ದೋಟಿಹಾಳ, ಶರಣಪ್ಪ ಕಲ್ಲಹಳ್ಳಿ, ಮಂಜಪ್ಪ ಬೆಳಗಟ್ಟಿ, ಯಮನಪ್ಪ ಚುಂಗಿನ, ಸೋಮು ಹೈತಾಪುರ, ಪ್ರಕಾಶ ನಾಡಗೌಡರ, ಈಶಪ್ಪ ಗೋಡಿ, ಅಮರೇಶ ಹಿರೇಮಠ, ನಾಗರಾಜ ಸಜ್ಜನ, ಯಮನಪ್ಪ ಹಳ್ಳಿಕೇರಿ, ದುರಗವ್ವ ತಳಗೇರಿ, ಮಂಜಪ್ಪ ಕುರಿ, ಶಂಕ್ರಪ್ಪ ಮ್ಯಾಗೇರಿ, ದೇವಪ್ಪ ಶಿರೂರ, ಬಸಪ್ಪ ಮೇಟಿ, ಮಲ್ಲೇಶ ಕಟ್ಟಿಮನಿ, ಶ್ರೀಕಾಂತ ಜನಸೂರ, ನಿಂಗಪ್ಪ ಗೋಡಿ, ನೀಲಪ್ಪ ಶಿರೋಳ, ವೀರೇಶ ರೋಣದ, ಹಂಚಾಳಪ್ಪ ಉಪ್ಪಾರ, ನಿಂಗಪ್ಪ ತಳಗೇರ, ಬಸವರಾಜ ಬಾರಕೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಜನರ ಬದುಕಿನ ಗುಣಮಟ್ಟ ಸುಧಾರಿಸುವುದೇ ಸರ್ಕಾರದ ಯೋಜನೆಗಳ ಮುಖ್ಯ ಉದ್ದೇಶ.”

– ಮಿಥುನ ಜಿ. ಪಾಟೀಲ, ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img