HomeIndia NewsNEET ವಿವಾದದ ಬಳಿಕ ಕೇಂದ್ರ ಸಂಪುಟದಲ್ಲಿ ಬದಲಾವಣೆ; ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ!

NEET ವಿವಾದದ ಬಳಿಕ ಕೇಂದ್ರ ಸಂಪುಟದಲ್ಲಿ ಬದಲಾವಣೆ; ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ!

For Dai;y Updates Join Our whatsapp Group

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಪ್ರಲ್ಹಾದ್ ಜೋಶಿ ಅವರು ಈಗಾಗಲೇ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದರ ಜೊತೆಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನೂ ನಿಭಾಯಿಸಲಿದ್ದಾರೆ.

ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಲ್ಹಾದ್ ಜೋಶಿ ಅವರು ಈ ಹಿಂದೆ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ದೇಶದ ಶಿಕ್ಷಣ ಕ್ಷೇತ್ರದ ಮಹತ್ವದ ಜವಾಬ್ದಾರಿ ಅವರ ಹೆಗಲೇರಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img