HomeBagalkotಜಮಖಂಡಿ ಕಾರು ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್! ‘ಇದು ಬಾಂಬ್ ಬ್ಲಾಸ್ಟ್ ಅಲ್ಲ’ ಎಂದ ಎಸ್‌ಪಿ

ಜಮಖಂಡಿ ಕಾರು ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್! ‘ಇದು ಬಾಂಬ್ ಬ್ಲಾಸ್ಟ್ ಅಲ್ಲ’ ಎಂದ ಎಸ್‌ಪಿ

For Dai;y Updates Join Our whatsapp Group

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಇದು ಬಾಂಬ್ ಸ್ಫೋಟವಲ್ಲ, ಕಾರಿನ ತಾಂತ್ರಿಕ ದೋಷ ಅಥವಾ ಬ್ಯಾಟರಿ ಸಮಸ್ಯೆಯಿಂದ ಸಂಭವಿಸಿರಬಹುದಾದ ಘಟನೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಸ್ಪಷ್ಟಪಡಿಸಿದ್ದಾರೆ.

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಸಂಭವಿಸಿದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌ಪಿ ಸಿದ್ಧಾರ್ಥ ಗೋಯಲ್, ಸದ್ಯದ ತನಿಖೆಯಲ್ಲಿ ಯಾವುದೇ ಸ್ಫೋಟಕ ಬಳಸಿರುವ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿದ್ದು, ಕಾರಿನೊಳಗೆ ಬಾಂಬ್ ಇರಿಸಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ದೊರೆತಿಲ್ಲ. ಕಾರಿನ ಬ್ಯಾಟರಿ ಅಥವಾ ಇತರ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದೇ ಎಂಬ ನಿಟ್ಟಿನಲ್ಲಿ ತಜ್ಞರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸ್ಫೋಟದ ತೀವ್ರತೆ ಸುಮಾರು 50ರಿಂದ 60 ಮೀಟರ್ ವ್ಯಾಪ್ತಿಯಷ್ಟೇ ಕಂಡುಬಂದಿದೆ. ಬಾಂಬ್ ಸ್ಫೋಟವಾಗಿದ್ದರೆ ಹಾನಿಯ ಪ್ರಮಾಣ ಮತ್ತಷ್ಟು ಭೀಕರವಾಗಿರುತ್ತಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಒಬ್ಬ ವ್ಯಕ್ತಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತಾಂತ್ರಿಕ ಪರಿಶೀಲನೆ ಮತ್ತು ತಜ್ಞರ ಅಂತಿಮ ವರದಿ ಬಂದ ಬಳಿಕವೇ ಸ್ಫೋಟಕ್ಕೆ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ (ಜು. 25) ರಾತ್ರಿ ಸುಮಾರು 10.45ಕ್ಕೆ ಹಿಪ್ಪರಗಿ ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಏಕಾಏಕಿ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದ್ದು, ಅದರ ಬಿಡಿಭಾಗಗಳು ಸುತ್ತಮುತ್ತ ಚದುರಿಬಿದ್ದಿದ್ದವು.

ಈ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಬಳಸುತ್ತಿದ್ದರು. ಹೊಸ ಕಾರಾಗಿದ್ದ ಕಾರಣ ಯಾರೋ ಬಾಂಬ್ ಇರಿಸಿರಬಹುದೆಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಆ ಅನುಮಾನಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img