HomeEntertainmentರಾಮ್ ಚರಣ್‌ಗೆ ಯಶಸ್ವಿ ಮಣಿಕಟ್ಟು ಶಸ್ತ್ರಚಿಕಿತ್ಸೆ! ಚಿರಂಜೀವಿಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ಮತ್ತೆ ನೆರವಿಗೆ

ರಾಮ್ ಚರಣ್‌ಗೆ ಯಶಸ್ವಿ ಮಣಿಕಟ್ಟು ಶಸ್ತ್ರಚಿಕಿತ್ಸೆ! ಚಿರಂಜೀವಿಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ಮತ್ತೆ ನೆರವಿಗೆ

For Dai;y Updates Join Our whatsapp Group

ಮಣಿಕಟ್ಟಿನ ತೀವ್ರ ಗಾಯದಿಂದ ಬಳಲುತ್ತಿದ್ದ ನಟ ರಾಮ್ ಚರಣ್ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕೋಯಂಬತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ನಡೆದ ಈ ವಿಶೇಷ ಸರ್ಜರಿಗಾಗಿ ಅಮೆರಿಕದ ಖ್ಯಾತ ಹ್ಯಾಂಡ್ ಮತ್ತು ರಿಸ್ಟ್ ಸರ್ಜನ್ ಡಾ. ಅಲೆಹಾಂಡ್ರೋ ಬಾಡಿಯಾ ಅವರನ್ನು ವಿಶೇಷವಾಗಿ ಭಾರತಕ್ಕೆ ಕರೆಸಿಕೊಳ್ಳಲಾಗಿತ್ತು.

‘ಪೆದ್ದಿ’ ಚಿತ್ರದ ಪ್ರಚಾರದ ವೇಳೆಯೇ ರಾಮ್ ಚರಣ್ ಕೈಗೆ ಬ್ಯಾಂಡೇಜ್ ಧರಿಸಿ ಕಾಣಿಸಿಕೊಂಡಿದ್ದರು. ಮಣಿಕಟ್ಟಿನ ಸಮಸ್ಯೆ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವೆಂದು ಸೂಚಿಸಿದ್ದರು.

ಶಸ್ತ್ರಚಿಕಿತ್ಸೆಗೆ ವಿಶ್ವಪ್ರಸಿದ್ಧ ಆರ್ಥೋಪೆಡಿಕ್ ತಜ್ಞ ಡಾ. ಎಸ್. ರಾಜಶೇಖರನ್ ನೇತೃತ್ವ ವಹಿಸಿದ್ದರು. ಈ ಹಿಂದೆ ಚಿರಂಜೀವಿ ಅವರ ಬೆನ್ನುಮೂಳೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದ ಅನುಭವ ಹೊಂದಿರುವ ಅವರು, ಮತ್ತೊಮ್ಮೆ ಮೆಗಾ ಕುಟುಂಬದ ವಿಶ್ವಾಸ ಉಳಿಸಿಕೊಂಡಿದ್ದಾರೆ.

ಅಮೆರಿಕದ ಮಿಯಾಮಿಯಿಂದ ಆಗಮಿಸಿದ ಡಾ. ಅಲೆಹಾಂಡ್ರೋ ಬಾಡಿಯಾ, ಡಾ. ಪ್ರವೀಣ್ ಭಾರದ್ವಾಜ್ ಹಾಗೂ ತಜ್ಞರ ತಂಡದ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕೈ ಮತ್ತು ಮಣಿಕಟ್ಟು ಗಾಯಗಳ ಚಿಕಿತ್ಸೆಯಲ್ಲಿ ಬಾಡಿಯಾ ವಿಶ್ವದ ಪ್ರಮುಖ ತಜ್ಞರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ.

ಸರ್ಜರಿ ಸಮಯದಲ್ಲಿ ಚಿರಂಜೀವಿ, ಸುರೇಖಾ ಮತ್ತು ಉಪಾಸನಾ ಆಸ್ಪತ್ರೆಯಲ್ಲೇ ಇದ್ದು ರಾಮ್ ಚರಣ್‌ಗೆ ಮಾನಸಿಕ ಧೈರ್ಯ ತುಂಬಿದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಕೆಲವು ದಿನ ವಿಶ್ರಾಂತಿ ಪಡೆದ ಬಳಿಕ ಹೈದರಾಬಾದ್‌ಗೆ ಮರಳಲಿದ್ದಾರೆ. ರಾಮ್ ಚರಣ್ ಶೀಘ್ರ ಗುಣಮುಖರಾಗಿ ಮತ್ತೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img