HomeDharwadಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ತುಳಸಿ ಮದ್ದಿನೇನಿ

ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ತುಳಸಿ ಮದ್ದಿನೇನಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ: ಬರಗಾಲದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಜನರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯ ಆರೋಗ್ಯ ತಪಾಸಣಾ ಶಿಬಿರಗಳು, ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ, ಡೆಂಗ್ಯೂ ಹಾಗೂ ಮಲೇರಿಯಾ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಅವರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಮೃತಪಟ್ಟ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿ, ಅರ್ಹತೆ ಇಲ್ಲದವರ ಹೆಸರನ್ನು ಯೋಜನೆಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಮುಂಚೂಣಿಯಲ್ಲಿರಬೇಕು ಎಂದು ಸೂಚಿಸಿದ ಅವರು, ಶಾಲೆಗಳಲ್ಲಿ ಎಐ (ಕೃತಕ ಬುದ್ಧಿಮತ್ತೆ) ಪಠ್ಯಕ್ರಮ, ವಿದ್ಯಾರ್ಥಿಗಳ ಹಾಜರಾತಿ, ಅತಿಥಿ ಉಪನ್ಯಾಸಕರ ನೇಮಕ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಕುರಿತು ಮಾಹಿತಿ ಪಡೆದರು.

ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ವಿತರಣೆ, ಸ್ವಯಂ ಉದ್ಯೋಗ ತರಬೇತಿ, ಪಡಿತರ ವಿತರಣೆ ಹಾಗೂ ಸರ್ಕಾರಿ ಅಧಿಕಾರಿಗಳು ಕರ್ತವ್ಯ ಆ್ಯಪ್ ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ನಿಯಮ ಪಾಲಿಸದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ ನೀಡಿ, ಜೂನ್ 1ರಿಂದ ಜುಲೈ 29ರವರೆಗೆ ಜಿಲ್ಲೆಯಲ್ಲಿ ವಾಡಿಕೆ 265.9 ಮಿ.ಮೀ. ಮಳೆಯ ಬದಲಿಗೆ 176.5 ಮಿ.ಮೀ. ಮಳೆಯಾಗಿದ್ದು, ಶೇ.34ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಬೆಳೆಯ 2.82 ಲಕ್ಷ ಹೆಕ್ಟೇರ್ ಗುರಿಯಲ್ಲಿ 2.71 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಶೇ.95.89ರಷ್ಟು ಸಾಧನೆ ಕಂಡಿದೆ. ತೋಟಗಾರಿಕೆ ಬೆಳೆ 22,857 ಹೆಕ್ಟೇರ್ ಗುರಿಯಲ್ಲಿ 16,234 ಹೆಕ್ಟೇರ್ ಬಿತ್ತನೆಯಾಗಿದ್ದು, ಶೇ.71ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಜಿಲ್ಲೆಯ 18 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 21 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಾನುವಾರುಗಳಿಗೆ ಮುಂದಿನ 45 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಮೇವು ಬ್ಯಾಂಕ್‌ಗಳನ್ನು ತೆರೆಯಲು ಸ್ಥಳ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

“ಬರಗಾಲದ ಸಂದರ್ಭದಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪರಿಣಾಮಕಾರಿಯಾಗಿ ಸೇವೆ ಒದಗಿಸಬೇಕು. ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.”

– ತುಳಸಿ ಮದ್ದಿನೇನಿ, ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img