ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 73ನೇ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಗದಗ ನಗರಕ್ಕೆ ಆಗಮಿಸಿದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಕಂಬಳಿ ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಬಿಜೆಪಿ ಪ್ರಕೊಷ್ಠಗಳ ಸಹ ಸಂಯೋಜಕ ರಮೇಶ ಎನ್. ಸಜ್ಜಗಾರ, ಕುರುಬ ಸಮಾಜದ ಮುಖಂಡ ಶಿವು ಡಂಬಳ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ರಾಜು ಕುರುಡಗಿ, ಬಿಜೆಪಿ ಮುಖಂಡ ಭೀಮಸಿಂಗ್ ರಾಠೋಡ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ನಿವೃತ್ತ ಶಿಕ್ಷಕರಾದ ಚಂದ್ರಶೇಖರ ಜೋರಗಸ್ತಿ, ಗುಡದಪ್ಪ ಹಂಚಿನಾಳ, ಆನಂದ ಬೋಸಗಿ, ಮಂಜುನಾಥ ಶಾಂತಗೇರಿ, ರವಿ ಮಾನ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



