HomeRamanagaraಚಾಮುಂಡೇಶ್ವರಿ ಕರಗ ಮಹೋತ್ಸವ ಆರಂಭ: ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿ ಕರಗ ಮಹೋತ್ಸವ ಆರಂಭ: ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

For Dai;y Updates Join Our whatsapp Group

ರಾಮನಗರ: ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದು, ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಿದರು. ರಾಮನಗರದಲ್ಲಿ ಸಾಂಸ್ಕೃತಿಕ ವೈಭವದೊಂದಿಗೆ ಮಹೋತ್ಸವ ಆರಂಭವಾಗಿದೆ.

ಮಹೋತ್ಸವದ ಅಂಗವಾಗಿ ನಗರದ 16 ದೇವಾಲಯಗಳಿಗೆ ಮಡಿಲಕ್ಕಿ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್, ಧಾರ್ಮಿಕ ಸೌಹಾರ್ದತೆಯ ಸಂದೇಶ ಸಾರಿದರು. ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿದ್ದರೂ ಪ್ರತಿವರ್ಷ ಈ ಸಂಪ್ರದಾಯವನ್ನು ಮುಂದುವರಿಸುತ್ತಿರುವುದು ಗಮನಾರ್ಹವಾಗಿದೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಟ ಕಿಚ್ಚ ಸುದೀಪ್, ನಿನಾಸಂ ಸತೀಶ್, ಗಿಲ್ಲಿ ಚಿತ್ರದ ನಟ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿ ಮನರಂಜನೆ ನೀಡಲಿದ್ದಾರೆ.

ಮಂಗಳವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹಾಗೂ ಹಲವು ಶಾಸಕರು ಪಾಲ್ಗೊಳ್ಳಲಿದ್ದಾರೆ.

ಮಹೋತ್ಸವ ಸುಗಮವಾಗಿ ನಡೆಯಲು 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಗರಾದ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img