HomeIndia Newsಭೀಕರ ರಸ್ತೆ ಅಪಘಾತದಲ್ಲಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸೇರಿ ಮೂವರ ದುರ್ಮರಣ..!

ಭೀಕರ ರಸ್ತೆ ಅಪಘಾತದಲ್ಲಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸೇರಿ ಮೂವರ ದುರ್ಮರಣ..!

For Dai;y Updates Join Our whatsapp Group

ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜಕಾರಣಿ ಹಾಗೂ ಮಾಫಿಯಾ ಡಾನ್ ಆಗಿದ್ದ ಅತೀಕ್ ಅಹ್ಮದ್ ಅವರ ಕಿರಿಯ ಪುತ್ರ ಆಬಾನ್ ಅಹ್ಮದ್ ಸೇರಿದಂತೆ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಝಾನ್ಸಿಯ ಪುಂಚ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಬಾನ್ ಅಹ್ಮದ್ ಪ್ರಯಾಣಿಸುತ್ತಿದ್ದ ಕಾರು ಅತಿವೇಗದಲ್ಲಿ ಬಂದು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಮೃತರು ಪ್ರಯಾಗ್‌ರಾಜ್‌ನಿಂದ ಝಾನ್ಸಿ ಜೈಲಿನಲ್ಲಿರುವ ಅತೀಕ್ ಅಹ್ಮದ್ ಅವರ ಮತ್ತೊಬ್ಬ ಪುತ್ರ ಅಲಿ ಅಹ್ಮದ್ ಅವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಅತೀಕ್ ಅಹ್ಮದ್ ಹಿನ್ನೆಲೆ

ಅತೀಕ್ ಅಹ್ಮದ್ ಉತ್ತರ ಪ್ರದೇಶದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

ಅಪರಾಧ ಹಿನ್ನೆಲೆಯ ನಡುವೆಯೂ ಅವರು ರಾಜಕೀಯ ಪ್ರವೇಶಿಸಿ, ಉತ್ತರ ಪ್ರದೇಶದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಸಮಾಜವಾದಿ ಪಕ್ಷದ ಸಂಸದರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು 2023ರ ಫೆಬ್ರವರಿಯಲ್ಲಿ ಅತೀಕ್ ಅಹ್ಮದ್ ಗ್ಯಾಂಗ್ ಹತ್ಯೆ ಮಾಡಿತ್ತು ಎಂದು ಆರೋಪಿಸಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಅತೀಕ್ ಅಹ್ಮದ್ ಪುತ್ರ ಅಸದ್ ಅಹ್ಮದ್ ಅವರನ್ನು ಉತ್ತರ ಪ್ರದೇಶ ಪೊಲೀಸರು 2023ರ ಏಪ್ರಿಲ್ 13ರಂದು ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು.

ಅಸದ್ ಎನ್‌ಕೌಂಟರ್ ನಡೆದ ಎರಡು ದಿನಗಳ ಬಳಿಕ, 2023ರ ಏಪ್ರಿಲ್ 15ರಂದು ಪೊಲೀಸ್ ಭದ್ರತೆಯಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದ ವೇಳೆ ಅತೀಕ್ ಅಹ್ಮದ್ ಹಾಗೂ ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಮಾಧ್ಯಮ ಪ್ರತಿನಿಧಿಗಳ ವೇಷದಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img