HomeGadag Newsಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನ ಫೆ.21ರಂದು ಭಾವೈಕ್ಯತೆ ದಿನ ಆಚರಣೆಗೆ ಶೀಘ್ರ ಆದೇಶ; ಸಿಎಂ...

ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನ ಫೆ.21ರಂದು ಭಾವೈಕ್ಯತೆ ದಿನ ಆಚರಣೆಗೆ ಶೀಘ್ರ ಆದೇಶ; ಸಿಎಂ ಬೊಮ್ಮಾಯಿ

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ಗದುಗಿನ ತೋಂಟದ ಲಿಂ.ಜ.ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನವಾದ ಫೆಬ್ರುವರಿ 21 ಅನ್ನು ಭಾವೈಕ್ಯತೆಯ ದಿನವನ್ನಾಗಿ ಆಚರಿಸಲು ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಶ್ರೀ ಜಗದ್ಗುರು ಡಾ. ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಐಕ್ಯಮಂಟಪ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ತೋಂಟದಾರ್ಯ ಮಠದೊಂದಿಗೆ 35 ವರ್ಷದ ಒಡನಾಟವಿದ್ದು, ನನ್ನ ಮೇಲೆ ಲಿಂಗೈಕ್ಯ ಹಿರಿಯ ಶ್ರೀಗಳ ಆಶೀರ್ವಾದವಿದೆ. ಶ್ರೀಗಳ ಐಕ್ಯ ಮಂಟಪ‌ವನ್ನು ಲೋಕಾರ್ಪಣೆ‌ ಮಾಡಿದ್ದು‌ ನನ್ನ ಪೂರ್ವ ಜನ್ಮದ ಪುಣ್ಯ. ಅಲ್ಲದೆ, ನಾನು ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿಲ್ಲ. ಭಕ್ತನಾಗಿ ಬಂದಿದ್ದೇನೆ ಎಂದ‌ ಅವರು, ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವುದು ಸಾಧಕ. ಹೀಗಾಗಿ ಶ್ರೀಗಳು ನಮ್ಮೊಂದಿಗೆ ಬದುಕಿದ್ದು, ಅವರ ಐಕ್ಯ ಮಂಟಪ‌ ನಮ್ಮೆಲ್ಲರ ಭಕ್ತಿಭಾವಗಳ ಐಕ್ಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಫೆಬ್ರುವರಿ 21 ಅನ್ನು ಭಾವೈಕ್ಯತೆಯ ದಿನವನ್ನಾಗಿ ಆಚರಿಸಬೇಕೆಂಬುವುದು ಶ್ರೀ ಮಠದ ಭಕ್ತರ ಆಸಯವಾಗಿತ್ತು. ಭಾವೈಕ್ಯತೆಯ ದಿನವನ್ನಾಗಿ ಆಚರಿಸುವಂತೆ ಸರ್ಕಾರಕ್ಕೂ ಹಲವು ಬಾರಿ‌ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತೋಂಟದಾರ್ಯ ಜಾತ್ರಾ ಮಹೋತ್ಸವದಂದೇ ಸಿಎಂ ಬಸವರಾಜ ಬೊಮ್ಮಾಯಿ, ಶೀಘ್ರದಲ್ಲೇ ಆದೇಶಿಸಲಾಗುವುದು ಎಂದು ಹೇಳಿರುವುದು ಶ್ರೀಮಠದ ಭಕ್ತರಲ್ಲಿ ಹರ್ಷವನ್ನುಂಟು‌ ಮಾಡಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಶಾಸಕ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದುರದುಂಡಿಶ್ವರ ಮಠ ಅರಬಾವಿ, ಶ್ರೀ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾಮಠ ಮುಂಡರಗಿ-ಬೈಲೂರ, ಶ್ರೀ ಗುರುಬಸವ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾ ಮಠ ಶಿರೋಳ, ಶ್ರೀ ಶಾಂತಲಿಂಗ ಮಹಾಸ್ವಾಮಿಗಳು ದೊರೆಸ್ವಾಮಿ ವೀರಕ್ತಮಠ ಭೈರನಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!