HomeKarnataka News4 ಸಾರಿಗೆ ನಿಗಮಗಳಿಂದ 15 ಸಾವಿರಕ್ಕೂ ಹೆಚ್ಚು ಹೊಸ ಬಸ್ʼಗಳ ಖರೀದಿಗೆ ಚಾಲನೆ: ಬೈರತಿ ಸುರೇಶ್

4 ಸಾರಿಗೆ ನಿಗಮಗಳಿಂದ 15 ಸಾವಿರಕ್ಕೂ ಹೆಚ್ಚು ಹೊಸ ಬಸ್ʼಗಳ ಖರೀದಿಗೆ ಚಾಲನೆ: ಬೈರತಿ ಸುರೇಶ್

For Dai;y Updates Join Our whatsapp Group

ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನವು ಬ್ರಿಟಿಷರ ದಾಸ್ಯದಿಂದ ಭಾರತ ಮುಕ್ತಗೊಂಡ ಐತಿಹಾಸಿಕ ದಿನ. ನಮ್ಮದೇ ಸಂವಿಧಾನ ಹಾಗೂ ನಮ್ಮದೇ ಆಶೋತ್ತರಗಳಿಗೆ ರೆಕ್ಕೆ ನೀಡಿದ ದಿನ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳ ಖರೀದಿ

ತಾವು ಸಾರಿಗೆ ಸಚಿವರಾದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸುವ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ₹286 ಕೋಟಿ ವೆಚ್ಚದಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲಾಗಿದೆ ಎಂದು ತಿಳಿಸಿದರು.

ಇದರ ಜೊತೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಹಾಗೂ ಈಗಿರುವ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಹೊಸ ಬಸ್‌ಗಳನ್ನು ಖರೀದಿಸಿ, ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಬೈರತಿ ಸುರೇಶ್ ತಿಳಿಸಿದರು.

ಇ-ಖಾತೆ ಸುಲಭಗೊಳಿಸಲು ಕ್ರಮ

ಈ ಹಿಂದೆ ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದ ಆರನೇ ಗ್ಯಾರಂಟಿಯಾದ ಭೂ-ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ (KTCP Act), 1961ರಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

ಎಲ್ಲರಿಗೂ ಸುಲಭವಾಗಿ ಇ-ಖಾತೆ ದೊರೆಯುವಂತೆ ಇ-ಖಾತೆ ರೋಲ್‌ಔಟ್‌ ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಲು ಅಗತ್ಯ ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img