HomeGadag Newsಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗದಗ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿ ಬಲಿದಾನಗೈದಿದ್ದಾರೆ. ಅಂತಹ ಮಹನೀಯರ ತ್ಯಾಗ, ಬಲಿದಾನದಿಂದಲೇ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂದು ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮುಖಂಡರಾದ ಎಂ.ಎಸ್. ಕರೀಗೌಡ್ರ, ಲಿಂಗರಾಜ ಪಾಟೀಲ, ಸುರೇಶ ಮರಳಪ್ಪನವರ, ಅಶೋಕ ನವಲಗುಂದ, ಜಗನ್ನಾಥಸಾ ಭಾಂಡಗೆ, ಬಿ.ಎಚ್. ಲದ್ವಾ, ಎಂ.ಎಂ. ಹಿರೇಮಠ, ಸಿದ್ದು ಪಲ್ಲೇದ, ವಿಜಯಕುಮಾರ ಗಡ್ಡಿ, ರವಿ ದಂಡಿನ, ಸುಧೀರ ಕಾಟಿಗರ, ಶಂಕರ ಕಾಕಿ, ಸಂತೋಷ ಅಕ್ಕಿ, ನಿಂಗಪ್ಪ ಹುಗ್ಗಿ, ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಕೆ.ಪಿ. ಕೋಟಿಗೌಡ್ರ, ಅನೀಲ ಅಬ್ಬಿಗೇರಿ, ಶಿವು ಹಿರೇಮನಿಪಾಟೀಲ, ಪ್ರಶಾಂತ ನಾಯ್ಕರ, ದೇವಪ್ಪ ಗೊಟೂರ, ಅಮರನಾಥ ಬೆಟಗೇರಿ, ರಮೇಶ ಸಜ್ಜಗಾರ, ಮಾದವ ಗಣಾಚಾರಿ, ಕಿರಣ ಭೂಮಾ, ಜಯಶ್ರೀ ಉಗಲಾಟದ, ನಿರ್ಮಲಾ ಕೊಳ್ಳಿ, ಸ್ವಾತಿ ಅಕ್ಕಿ, ವಂದನಾ ವರ್ಣೇಕರ, ಶಾರದಾ ಸಜ್ಜನರ, ಅಶ್ವೀನಿ ಜಗತಾಪ್, ಪದ್ಮನಿ ಮುತ್ತಲದಿನ್ನಿ, ಮೇಘಾ ಕೊಟ್ಟೂರ, ಪ್ರೀತಿ ಶಿವಪ್ಪನಮಠ, ರವಿ ಮಾನ್ವಿ, ಅಕ್ಕಮ್ಮ ವಸ್ತçದ, ವಿನೋದ ಹಂಸನೂರ, ಮಂಜುನಾಥ ಪಟ್ಟಣಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img