HomeKarnataka News"2028ರ ಕರ್ನಾಟಕ ಚುನಾವಣೆ ನಮ್ಮ ಗುರಿ": ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್ ಹೇಳಿಕೆ

“2028ರ ಕರ್ನಾಟಕ ಚುನಾವಣೆ ನಮ್ಮ ಗುರಿ”: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್ ಹೇಳಿಕೆ

For Dai;y Updates Join Our whatsapp Group

ಹುಬ್ಬಳ್ಳಿ: ಬಿಜೆಪಿಯ ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಎಂ. ನಾಗರಾಜ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಹಿಂದುಳಿದ ವರ್ಗಗಳಿಗೆ ಈ ಜವಾಬ್ದಾರಿ ಸಿಕ್ಕಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಜೊತೆಗೆ, 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿಯ ಪ್ರಮುಖ ಗುರಿ ಎಂದು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ನೇಮಕವನ್ನು ಹಿಂದುಳಿದ ವರ್ಗಗಳಿಗೆ ದೊರೆತ ಗೌರವವೆಂದು ಪರಿಗಣಿಸುತ್ತೇನೆ ಎಂದರು. ಈ ಜವಾಬ್ದಾರಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

2028ರ ಕರ್ನಾಟಕ ವಿಧಾನಸಭಾ ಚುನಾವಣೆ ಪಕ್ಷದ ಪ್ರಮುಖ ಗುರಿಯಾಗಿದ್ದು, ಚುನಾವಣಾ ಫಲಿತಾಂಶವೇ ನಮ್ಮ ದೊಡ್ಡ ಸವಾಲು ಎಂದು ಅವರು ಹೇಳಿದರು. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಿ, ಜನರೊಂದಿಗೆ ನೇರ ಸಂಪರ್ಕ ಸಾಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಎಂ. ನಾಗರಾಜ್ ತಿಳಿಸಿದರು. ರಾಷ್ಟ್ರೀಯ ಜವಾಬ್ದಾರಿಯ ಬೆನ್ನಲ್ಲೇ 2028ರ ಚುನಾವಣೆಯ ಗುರಿ ಘೋಷಿಸಿರುವುದು ರಾಜ್ಯ ಬಿಜೆಪಿ ಸಂಘಟನೆಯಲ್ಲಿ ಹೊಸ ಚಟುವಟಿಕೆಗೆ ಸಂಕೇತವೆಂದು ಪರಿಗಣಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img