ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಹೋಬಳಿ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಟ್ಟಣದ ಶ್ರೀ ವೀರಪ್ಪಜ್ಜನ ಮಠದ ಆವರಣದಲ್ಲಿ ಗುರುವಾರ ವಿಶ್ವ ಛಾಯಾಗ್ರಾಹಕರ 187ನೇ ದಿನಾಚರಣೆಯನ್ನು ಆಚರಿಸಲಾಯಿತು.
ಛಾಯಾಗ್ರಹಣದ ಪಿತಾಮಹ ಲೂಯಿಸ್ ಡಾಗ್ಯುರೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ದಿನಾಚರಣೆಯ ಸ್ಮರಣಾರ್ಥ ಮಠದ ಆವರಣದಲ್ಲಿ ಸಸಿ ನೆಡಲಾಯಿತು.
ಛಾಯಾಗ್ರಹಣವು ಸಮಾಜದ ಮಹತ್ವದ ಘಟನೆಗಳು, ಸಂಸ್ಕೃತಿ ಹಾಗೂ ಪರಂಪರೆಯನ್ನು ದಾಖಲಿಸಿ ಮುಂದಿನ ಪೀಳಿಗೆಗೆ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಡಾ. ಎಲ್.ಎಸ್. ಗೌರಿ, ನಿವೃತ್ತ ಪ್ರಾಚಾರ್ಯ ಬಿ.ಎನ್. ಜಾಲಿಹಾಳ, ಪಪಂ ಮಾಜಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರದಾನ್ಯಮಠ, ಈಶ್ವರ ಬೆಟಗೇರಿ, ಮಲ್ಲಯ್ಯ ಗುಂಡಗೋಪೂರಮಠ, ಮಲ್ಲಿಕಾರ್ಜುನ ಬೆಟಗೇರಿ, ಮಮ್ಮದರಫೀಕ ನದಾಫ್, ಸಮೀರ ಬಳಬಟ್ಟಿ, ಪ್ರವೀಣ ಸರ್ವಿ, ಗವಿಸಿದ್ದಪ್ಪ ಗೊಡಚಪ್ಪನವರ, ಚಂದ್ರು ಜೋಳದ, ಮಂಜು ಹುಯಿಲಗೋಳಮಠ, ಸುನೀಲ ಮಳಗಿ, ಮನೋಜ ರಾಯಬಾಗಿ ಸೇರಿದಂತೆ ಛಾಯಾಗ್ರಾಹಕರು ಉಪಸ್ಥಿತರಿದ್ದರು.



