HomeKarnataka NewsTipu Cutout Row: ಪಾಕ್ ಪರ ಹಾಡು ಪೋಸ್ಟ್ ಮಾಡಿದ ಆರೋಪ; ಚಿಕ್ಕಮಗಳೂರಿನಲ್ಲಿ ಪ್ರಮುಖ ಆರೋಪಿ...

Tipu Cutout Row: ಪಾಕ್ ಪರ ಹಾಡು ಪೋಸ್ಟ್ ಮಾಡಿದ ಆರೋಪ; ಚಿಕ್ಕಮಗಳೂರಿನಲ್ಲಿ ಪ್ರಮುಖ ಆರೋಪಿ ಅರೆಸ್ಟ್!

For Dai;y Updates Join Our whatsapp Group

ಚಿಕ್ಕಮಗಳೂರು: ಜಿಲ್ಲೆಯ ಟಿಪ್ಪು ನಗರದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಟಿಪ್ಪು ನಗರದ ನಿವಾಸಿ ಅಫ್ರಿದ್ (23) ಎಂದು ಗುರುತಿಸಲಾಗಿದೆ. ಖಾಸಗಿ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಅಫ್ರಿದ್, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಆರೋಪ ಆತನ ಮೇಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ:

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿವಾದಾತ್ಮಕ ವಿಡಿಯೋವನ್ನು ಸೃಷ್ಟಿಸಿ ಪೋಸ್ಟ್ ಮಾಡಿದವರಷ್ಟೇ ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರು ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿತ್ತು. ಈ ಕಟೌಟ್‌ ಹಿನ್ನೆಲೆಯಲ್ಲಿಟ್ಟು ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಅಳವಡಿಸಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು ಎನ್ನಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಡಿಯೋ ಹರಡುವಿಕೆಯಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆ ರಾಜ್ಯ ರಾಜಕಾರಣದಲ್ಲೂ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img