HomeKarnataka Newsಮೀನುಗಳಂತೆ ತೇಲಿಬಂದ ಮನುಷ್ಯರ ಶವಗಳು! ‘ಹೆಣಗಳ’ ರಾಶಿ ಕಂಡು ಬೆಚ್ಚಿಬಿದ್ದ ವಿಜಯಪುರ ಮಂದಿ

ಮೀನುಗಳಂತೆ ತೇಲಿಬಂದ ಮನುಷ್ಯರ ಶವಗಳು! ‘ಹೆಣಗಳ’ ರಾಶಿ ಕಂಡು ಬೆಚ್ಚಿಬಿದ್ದ ವಿಜಯಪುರ ಮಂದಿ

For Dai;y Updates Join Our whatsapp Group

ವಿಜಯಪುರ: ನಗರದ ಹೊರವಲಯದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಸೇರಿದಂತೆ ಆರು ಮಂದಿಯ ಶವಗಳು ಪತ್ತೆಯಾಗಿವೆ.

ಮೃತರು ವಿಜಯಪುರ ತಾಲೂಕಿನ ತೊರವಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (10), ವಿಕಾಸ (5) ಹಾಗೂ ಸಾನಿಕಾ (7) ಎಂದು ಗುರುತಿಸಲಾಗಿದೆ.

ಆಗಸ್ಟ್ 24ರಂದು ಶೋಭಾ ಜಾಲಗೇರಿ ಹಾಗೂ ಮಕ್ಕಳು ನಾಪತ್ತೆಯಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇದೀಗ ಭೂತನಾಳ ಕೆರೆಯ ಅಂಚಿನಲ್ಲಿ ಆರು ಮಂದಿಯ ಶವಗಳು ತೇಲಿ ಬಂದಿರುವುದು ಪತ್ತೆಯಾಗಿದೆ.

ಶೋಭಾ ಅವರು ಪತಿ ಮಲಕಾರಿ ಭೀಮರಾಯ ಜಾಲಗೇರಿ ಅವರೊಂದಿಗೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಬಳಿಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೊರಗೆ ಬಂದಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆರೆಯಿಂದ ಶವಗಳನ್ನು ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣದ ಕುರಿತು ಆದರ್ಶ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img