ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
‘ಮುಸ್ಲಿಂರನ್ನು ದೇಶ ಬಿಟ್ಟು ಕಳಿಸಲು ಸಾಧ್ಯವಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
ಶನಿವಾರ ಕೊಪ್ಪಳದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಅವರು ಈ ಮೇಲಿನಂತೆ ಹೇಳಿದರು.
‘ಸ್ವಾತಂತ್ರ್ಯ ನಂತರ ದೇಶ ವಿಭಜನೆಯಾಗಿ ಹಿಂದೂ, ಮುಸ್ಲಿಂ ರಾಷ್ಟ್ರಗಳು ಹುಟ್ಟಿಕೊಂಡವು. ನಮ್ಮ ದೇಶದಲ್ಲಿ ಅನೇಕ ಮುಸ್ಲಿಂ ಕುಟುಂಬ ಉಳಿದುಕೊಂಡವು. ಇಂದಿಗೂ ಅವರು ನಾವು ಒಂದೇ ಕುಟುಂಬದ ಅಣ್ಣತಮ್ಮಂದಿರಂತೆ ಸೌಹಾರ್ದತೆ, ಸಹೋದರತೆ, ಭ್ರಾತೃತ್ವದಿಂದ ಬದುಕುತ್ತಿದ್ದೇವೆ. ಹೀಗಾಗಿ ಅವರನ್ನು ದೇಶ ಬಿಟ್ಟು ಕಳಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಆಜಾನ್.. ಹೀಗೆ ದಿನದಿಂದ ದಿನಕ್ಕೆ ಹಿಂದೂ ಮುಸ್ಲಿಂರ ಮಧ್ಯೆ ವಿವಾದ ಹುಟ್ಟಿಕೊಳ್ಳುತ್ತಿರುವ ಹೊತ್ತಲ್ಲಿ ಬಿಜೆಪಿ ಸಂಸದರು ದೇಶದಲ್ಲಿರುವ ಮುಸ್ಲಿಂರನ್ನು ಭಾರತ ಬಿಟ್ಟು ಕಳಿಸಲು ಸಾಧ್ಯವಿಲ್ಲ ಎಂಬ ಹೇಳಿಕೆ ಗಮನಾರ್ಹವಾಗಿದೆ.
ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆಂದು ಹೇಳಲಾಗುತ್ತಿರುವ ಸಂಸದ ಸಂಗಣ್ಣ ಕರಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಸುವ ಕಾರಣಕ್ಕೆ ಅಲ್ಪಸಂಖ್ಯಾತರನ್ನು ಒಲೈಸಿಕೊಳ್ಳಲು ಇಷ್ಟೊಂದು ಪ್ರೀತಿ ತೋರುತ್ತಿದ್ದಾರೆಯೇ? ಎಂಬ ಚರ್ಚೆಗಳು ಜಿಲ್ಲೆಯಾದ್ಯಂತ ಶುರುವಾಗಿದೆ.

