Home Crime News ಟ್ಯಾಂಕರ್ ಹಾಯ್ದು ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಸಾವು

ಟ್ಯಾಂಕರ್ ಹಾಯ್ದು ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ:

ಇಲ್ಲಿಯ ಕೃಷಿ ಇಲಾಖೆ ಕಚೇರಿಯ ಮುಂದಿನ ಹುಬ್ಬಳ್ಳಿ ವಿಜಯಪೂರ ರಾಷ್ಟ್ರೀಯ ಹೆದಾರಿಯಲ್ಲಿ ಟ್ಯಾಂಕರ್ ಹಾಯ್ದು ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ನರಗುಂದ ಕಡೆಯಿಂದ ಬರುತ್ತಿದ್ದ ಟ್ಯಾಂಕರ್‍ಗೆ ದ್ವಿಚಕ್ರ ಸವಾರ ಡಿಕ್ಕಿ ಹೊಡೆದ ಪರಿಣಾಮ ಪಟ್ಟಣದ ಗೊಲ್ಲರ ಓಣಿಯ ನಿವಾಸಿ ಶ್ರೀನಿವಾಸ ಗೊಲ್ಲರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನಿಗೆ ಗಾಯಗಳಾಗಿದ್ದು ಸ್ಥಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಸಿಪಿಐ ಚಂದ್ರಶೇಖರ ಮಠಪತಿ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಕೆಲಹೊತ್ತು ವಾಹನಗಳ ದಟ್ಟಣೆಯಾಗಿದ್ದು ಕಂಡುಬಂತು. 


Spread the love

LEAVE A REPLY

Please enter your comment!
Please enter your name here