HomeEntertainmentರಾಜಕೀಯಕ್ಕೆ ರವಿಚಂದ್ರನ್ ಎಂಟ್ರಿ: ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’

ರಾಜಕೀಯಕ್ಕೆ ರವಿಚಂದ್ರನ್ ಎಂಟ್ರಿ: ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’

For Dai;y Updates Join Our whatsapp Group

ಬೆಂಗಳೂರು: ಚಿತ್ರರಂಗದಲ್ಲಿ ಅದ್ಧೂರಿ ಕನಸುಗಳನ್ನು ತೆರೆಗೆ ತಂದ ‘ಕನಸುಗಾರ’ ರವಿಚಂದ್ರನ್‌ ಇದೀಗ ರಾಜಕೀಯ ಅಂಗಳಕ್ಕೆ ಕಾಲಿಡಲಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಕಲಾ ಕ್ಷೇತ್ರದ ಸಾಧಕರ ಕೋಟಾದಲ್ಲಿ ರವಿಚಂದ್ರನ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ಚರ್ಚೆ ನಡೆಯುತ್ತಿದೆ ಎನ್ನಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಶಿಫಾರಸು ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ರವಿಚಂದ್ರನ್‌ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದವರು. ಯಾವುದೇ ರಾಜಕೀಯ ಪಕ್ಷದೊಂದಿಗೆ ಅಧಿಕೃತವಾಗಿ ಗುರುತಿಸಿಕೊಂಡಿಲ್ಲ. ಆದರೆ ಡಿ.ಕೆ. ಶಿವಕುಮಾರ್ ಅವರೊಂದಿಗೆ ರವಿಚಂದ್ರನ್ ಹೊಂದಿರುವ ವೈಯಕ್ತಿಕ ಆತ್ಮೀಯತೆ ಇದೀಗ ಈ ಚರ್ಚೆಯ ಕೇಂದ್ರಬಿಂದುವಾಗಿದೆ.

ರವಿಚಂದ್ರನ್ ಮತ್ತು ಶಿವಕುಮಾರ್ ಬಾಲ್ಯದ ಗೆಳೆಯರು ಹಾಗೂ ಶಾಲಾ ಸಹಪಾಠಿಗಳು ಎಂಬುದು ಈಗಾಗಲೇ ಬಹಿರಂಗವಾಗಿದೆ. ಇತ್ತೀಚಿನ ದಿನಗಳಲ್ಲಿ ಇಬ್ಬರ ಭೇಟಿಗಳು ಹೆಚ್ಚಾಗಿರುವುದು ಕೂಡ ರಾಜಕೀಯ ವಲಯದ ಗಮನ ಸೆಳೆದಿದೆ.

ವಿಶೇಷವಾಗಿ ಮದ್ದೂರಮ್ಮ ಉತ್ಸವದ ಸಂದರ್ಭದಲ್ಲಿ ರವಿಚಂದ್ರನ್ ಅವರು ಶಿವಕುಮಾರ್ ಅವರನ್ನು ಕೊಂಡಾಡಿದ್ದ ಮಾತುಗಳು ಇದೀಗ ಮತ್ತೆ ಚರ್ಚೆಯಾಗುತ್ತಿವೆ. ‘ನಾನು ಕೈ ಚಾಚುವ ಮುನ್ನವೇ ನನ್ನ ಕೈಹಿಡಿದಿದ್ದಾರೆ. ಜೀವನಪರ್ಯಂತ ಅವರ ಋಣದಲ್ಲಿ ಇರುತ್ತೇನೆ’ ಎಂಬ ಅರ್ಥದ ಮಾತುಗಳ ಮೂಲಕ ಸಿಎಂ ಮೇಲಿನ ತಮ್ಮ ಆತ್ಮೀಯತೆ ಹಾಗೂ ಕೃತಜ್ಞತೆಯನ್ನು ಅವರು ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಕಲಾ ಕ್ಷೇತ್ರದ ಕೋಟಾದಲ್ಲಿ ರವಿಚಂದ್ರನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಭಿಮಾನಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಳವಣಿಗೆಯನ್ನು ಸಂಭ್ರಮದಿಂದ ಹಂಚಿಕೊಳ್ಳುತ್ತಿದ್ದಾರೆ.

ರವಿಚಂದ್ರನ್ ಅವರ ಸಿನಿಮಾ ಬದುಕು ಹಲವು ದಶಕಗಳಷ್ಟು ಹಳೆಯದು. ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರಿಗೆ ಕಲಾ ಕ್ಷೇತ್ರದ ಸಾಧಕರಾಗಿ ಪರಿಷತ್ ಪ್ರವೇಶದ ಅವಕಾಶ ಸಿಗಬಹುದು ಎಂಬ ಚರ್ಚೆ ನಡೆಯುತ್ತಿದೆ.

ಆದರೆ ಇಲ್ಲಿ ಪ್ರಮುಖ ಅಂಶವೆಂದರೆ, ರವಿಚಂದ್ರನ್ ಅವರನ್ನು ವಿಧಾನ ಪರಿಷತ್‌ಗೆ ಕಳುಹಿಸುವ ಕುರಿತು ಕಾಂಗ್ರೆಸ್ ಪಕ್ಷವಾಗಲಿ ಅಥವಾ ಮುಖ್ಯಮಂತ್ರಿ ಕಚೇರಿಯಾಗಲಿ ಯಾವುದೇ ಅಧಿಕೃತ ನಿರ್ಧಾರ ಅಥವಾ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯದ ಮಟ್ಟಿಗೆ ಇದು ದೃಢಪಟ್ಟ ನೇಮಕಾತಿಯಲ್ಲ; ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ನಿರೀಕ್ಷೆ ಮತ್ತು ಚರ್ಚೆಯಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img