HomeBengaluru Newsಬೆಂಗಳೂರು ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್; ಸೆ.4ರಿಂದ ಈ ವಾಹನಗಳಿಗೆ ಸಂಚಾರ ನಿರ್ಬಂಧ!

ಬೆಂಗಳೂರು ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್; ಸೆ.4ರಿಂದ ಈ ವಾಹನಗಳಿಗೆ ಸಂಚಾರ ನಿರ್ಬಂಧ!

For Dai;y Updates Join Our whatsapp Group

ಬೆಂಗಳೂರು: ನಗರದ ಪ್ರಮುಖ ಫ್ಲೈಓವರ್‌ಗಳು ಹಾಗೂ ಎಲಿವೇಟೆಡ್‌ ಕಾರಿಡಾರ್‌ಗಳಲ್ಲಿ ನಿರ್ದಿಷ್ಟ ವಾಹನಗಳ ಸಂಚಾರಕ್ಕೆ ಸಂಚಾರ ಪೊಲೀಸ್‌ ಇಲಾಖೆ ನಿರ್ಬಂಧ ವಿಧಿಸಿದೆ.

ರಸ್ತೆ ಸುರಕ್ಷತೆ ಹೆಚ್ಚಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಹಾಗೂ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ನಿಯಮಗಳು ಸೆಪ್ಟೆಂಬರ್‌ 4ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್‌ 11ರಿಂದ ಅನ್ವಯವಾಗಲಿದೆ.

ಬಿಜಿಎಸ್ ಫ್ಲೈಓವರ್‌, ಮೈಸೂರು ರಸ್ತೆ:

ಬಿಜಿಎಸ್ ಫ್ಲೈಓವರ್‌ನಲ್ಲಿ 24 ಗಂಟೆಯೂ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.

ಬೆಳಗ್ಗೆ 7ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10 ಗಂಟೆವರೆಗೆ ಮೂರು ಚಕ್ರದ ಗೂಡ್ಸ್‌ ಆಟೋ ಸೇರಿದಂತೆ ಇತರೆ ಸರಕು ಸಾಗಣೆ ವಾಹನಗಳಿಗೂ ನಿರ್ಬಂಧ ಹೇರಲಾಗಿದೆ.

ಪೀಣ್ಯ ಎಲಿವೇಟೆಡ್‌ ಕಾರಿಡಾರ್:

ಪೀಣ್ಯ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಪ್ರಯಾಣಿಕರ ಆಟೋರಿಕ್ಷಾ ಹಾಗೂ ತ್ರಿಚಕ್ರ ಗೂಡ್ಸ್‌ ಆಟೋಗಳ ಸಂಚಾರಕ್ಕೆ 24 ಗಂಟೆಯೂ ನಿಷೇಧವಿದೆ.

ಬೆಳಗ್ಗೆ 7ರಿಂದ 11 ಗಂಟೆ ಹಾಗೂ ಸಂಜೆ 4ರಿಂದ ರಾತ್ರಿ 10 ಗಂಟೆವರೆಗೆ ಭಾರಿ ಮತ್ತು ಮಧ್ಯಮ ಸರಕು ಸಾಗಣೆ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್:

ಈ ಕಾರಿಡಾರ್‌ನಲ್ಲಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಭಾರಿ, ಮಧ್ಯಮ ಹಾಗೂ ಲಘು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.

ಇದಲ್ಲದೆ, ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋರಿಕ್ಷಾ ಹಾಗೂ ತ್ರಿಚಕ್ರ ಗೂಡ್ಸ್‌ ಆಟೋಗಳಿಗೆ 24 ಗಂಟೆಯೂ ಸಂಚಾರ ನಿಷೇಧಿಸಲಾಗಿದೆ. ಈ ನಿಯಮ ಸೆಪ್ಟೆಂಬರ್‌ 11ರಿಂದ ಜಾರಿಗೆ ಬರಲಿದೆ.

ಡಬಲ್‌ ಡೆಕ್ಕರ್‌ ಫ್ಲೈಓವರ್‌:

ಸಿಲ್ಕ್‌ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ ಇರುವ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ಸಂಚಾರ ನಿರ್ಬಂಧಿಸಲಾಗಿದೆ.

ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್‌ ಕಾರಿಡಾರ್:

ಸಂಜೀವ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ ಇರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳಿಗೆ 24 ಗಂಟೆಯೂ ನಿರ್ಬಂಧವಿದೆ.

ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ.

ನಗರದ ಪ್ರಮುಖ ಮೇಲ್ಸೇತುವೆಗಳಲ್ಲಿ ಸಂಚಾರ ಸುರಕ್ಷತೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಒತ್ತು ನೀಡುವ ಉದ್ದೇಶದಿಂದ ಈ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img