ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣ ಪಂಚಾಯಿತಿಗೆ ನೂತನ ಕಾರ್ಯಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಶೀಲ್ದಾರ ಕೆ. ರಾಘವೇಂದ್ರ ರಾವ್ ಅವರ ಮೂಲಕ ಪೌರಾಡಳಿತ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ಹಸನ ತಹಶೀಲ್ದಾರ, ಅಜ್ಜಪ್ಪ ಬಿಢವೆ, ಶರೀಫ ಗುಡಿಮನಿ, ಶಿವಾನಂದ ಸುಲ್ತಾನಪೂರ, ಮಂಜುನಾಥ ಲಮಾಣಿ, ಎಂ.ಎನ್. ಮೂರಶಿಳ್ಳಿ, ಸಾಧಿಕ ಮುಳಗುಂದ, ಮಂಜುನಾಥ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



