ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪಂಚಾಯಿತಿಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಆಗಮಿಸಿರುವ ಮುಕುಲ್ ಜೈನ್ ಅವರನ್ನು ವಿಬಿಜಿ-ರಾಮ್-ಜಿ ಯೋಜನೆಯ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬುಧವಾರ ಭೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಸುರೇಶ್ ಬಾಳಿಕಾಯಿ ಅವರು, ನೌಕರರ ಹಿತದೃಷ್ಟಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ವಿಬಿಜಿ-ರಾಮ್-ಜಿ ಯೋಜನೆಯ ನೌಕರರ ಕುಂದುಕೊರತೆ ಸಭೆ ನಡೆಸುವಂತೆ ಸಿಇಒ ಮುಕುಲ್ ಜೈನ್ ಅವರಿಗೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಸಿಇಒ ಮುಕುಲ್ ಜೈನ್ ಅವರು, ವಿಬಿಜಿ-ರಾಮ್-ಜಿ ಯೋಜನೆಯ ಎಲ್ಲ ನೌಕರರನ್ನು ಕರೆದು ಸಭೆ ನಡೆಸಿ, ಅವರ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಆಲಿಸುವುದಾಗಿ ಭರವಸೆ ನೀಡಿದರು.
ನೌಕರರ ಸಮಸ್ಯೆಗಳನ್ನು ಕಾಲಕಾಲಕ್ಕೆ ಆಲಿಸುವ ಮೂಲಕ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ ತೊಂದರೆಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರತಿನಿಧಿ ಕಿರಣಕುಮಾರ್, ನರಗುಂದ ತಾಲೂಕು ಅಧ್ಯಕ್ಷ ಹನುಮಂತ ಡಂಬಳ, ರೋಣ ತಾಲೂಕು ಅಧ್ಯಕ್ಷೆ ಶಾಂತಾ ತಿಮ್ಮರಡ್ಡಿ, ಮುಂಡರಗಿ ತಾಲೂಕು ಪ್ರತಿನಿಧಿ ಬಸವರಾಜ ಮನ್ನಮ್ಮನವರ, ಗದಗದ ನವೀನ ಬಸರಿ, ಶಿರಹಟ್ಟಿಯ ವೀರೇಶ ಪಟ್ಟಣಶೆಟ್ಟಿ, ಲಕ್ಷ್ಮೇಶ್ವರದ ಶ್ರೀನಿವಾಸ ಕಲಾಲ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳಾದ ಪಕ್ಕೀರೇಶ ನಿಟ್ಟಾಲಿ, ಅರುಣ ಸಿಂಗ್ರಿ, ಹರೀಶ್ ಸೊಬರದ, ಲಿಂಗರಾಜ ಮುದಿಗೌಡರ, ಮಲ್ಲಿಕಾರ್ಜುನ ಸರ್ವಿ, ವೀರಭದ್ರಪ್ಪ ಸಜ್ಜನ, ಲಿಂಗರಾಜ ಅರಿಶಿಣದ, ಮಂಜುನಾಥ ತಳವಾರ, ಅಜಯ್ ಅಬ್ಬಿಗೇರಿ ಹಾಗೂ ವಿವಿಧ ತಾಲೂಕುಗಳ ನೌಕರರು ಉಪಸ್ಥಿತರಿದ್ದರು.



