ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಕಪ್ಪತ್ತಗುಡ್ಡದ ಕಪ್ಪತ್ತ ಮಲ್ಲಯ್ಯ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಸಮರ್ಪಕ ಬಸ್ ಸೌಲಭ್ಯ ದೊರೆಯದೆ ಪರದಾಡುವಂತಾಗಿದೆ.
ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿರುವ ಕಪ್ಪತ್ತ ಮಲ್ಲಯ್ಯ ದೇವಸ್ಥಾನಕ್ಕೆ ತೆರಳಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನೂರಾರು ಭಕ್ತರು ಬಸ್ಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಸ್ಗಳಲ್ಲಿ ಸೀಟ್ಗಾಗಿ ಮಹಿಳೆಯರ ನಡುವೆ ವಾಗ್ವಾದವೂ ನಡೆದಿದೆ. ಕೆಲ ಮಹಿಳೆಯರು ಕಿಟಕಿಯಿಂದ ಮಕ್ಕಳನ್ನು ಎತ್ತಿಕೊಂಡು ಸೀಟ್ ಕಾಯ್ದಿರಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದಿವೆ.
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸದಿರುವುದಕ್ಕೆ ಸಾರಿಗೆ ಸಂಸ್ಥೆ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತ್ರೆಯ ಹಿನ್ನೆಲೆಯಲ್ಲಿ ಕಪ್ಪತ್ತಗುಡ್ಡಕ್ಕೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಕೂಡಲೇ ಒದಗಿಸುವಂತೆ ಭಕ್ತರು ಆಗ್ರಹಿಸಿದ್ದಾರೆ.

