ಸಿಟಿ ಲೈಟ್ಸ್ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ದುನಿಯಾ ವಿಜಯ್, ತಮ್ಮ ಸಾಂಸಾರಿಕ ವಿಚಾರಗಳ ಕುರಿತು ಇನ್ನು ಮುಂದೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಕುಟುಂಬ ಜೀವನಕ್ಕೆ ಸಂಬಂಧಿಸಿದ ವಿಚಾರಗಳನ್ನು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದಾಗಿಯೂ, ಮಕ್ಕಳ ವಿಚಾರ ಸೇರಿದಂತೆ ಎಲ್ಲವನ್ನೂ ತಿಳಿಸಿರುವುದಾಗಿಯೂ ಅವರು ಹೇಳಿದ್ದಾರೆ. ಈ ಬಗ್ಗೆ ಇನ್ನು ಮುಂದೆ ಯಾವುದೇ ಮಾತುಕತೆ ಇಲ್ಲ ಎಂದು ಅವರು ಫುಲ್ ಸ್ಟಾಪ್ ಇಟ್ಟಿದ್ದಾರೆ.
ಇದೇ ವೇಳೆ ಮಗನ ಪ್ರಕರಣದ ಕುರಿತೂ ಸ್ಪಷ್ಟನೆ ನೀಡಿದ ದುನಿಯಾ ವಿಜಯ್, ಮಗನಾದರೂ ತಪ್ಪು ಮಾಡಿದರೆ ಅದು ತಪ್ಪೇ ಆಗಿದ್ದು, ಕಾನೂನು ಅದನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದರು. “ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ” ಎಂದು ಪ್ರತಿಕ್ರಿಯಿಸಿದ ಅವರು,
ಮಗನ ಜೊತೆ ಮಾತನಾಡಿ ಬುದ್ಧಿ ಹೇಳಿರುವುದಾಗಿ ತಿಳಿಸಿದರು. ಮಕ್ಕಳಿದ್ದಾಗ ಜಗಳ ಇದ್ದೇ ಇರುತ್ತದೆ, ಇದು ಎಲ್ಲರ ಜೀವನದಲ್ಲೂ ಸಾಮಾನ್ಯ ಎಂದು ಅಭಿಪ್ರಾಯಪಟ್ಟ ವಿಜಿ, ತಾವೂ ಸಹ ಮಗನಿಗೆ ಬುದ್ಧಿ ಹೇಳಿರುವುದಾಗಿ ತಿಳಿಸಿ, ಫ್ಯಾಮಿಲಿ ವಿಚಾರಗಳ ಬಗ್ಗೆ ಮತ್ತೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.



