HomeGadag Newsಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ: ವಿರೇಶ್ ಬಡಿಗೇರ ಸೇರಿ ಮೂವರು ವಿರುದ್ಧ ಕೇಸ್

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ: ವಿರೇಶ್ ಬಡಿಗೇರ ಸೇರಿ ಮೂವರು ವಿರುದ್ಧ ಕೇಸ್

For Dai;y Updates Join Our whatsapp Group

ಗದಗ: ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 200 ಕ್ವಿಂಟಾಲ್ ಅಕ್ಕಿಯನ್ನು ಲಾರಿ ಸಮೇತ ವಶಪಡಿಸಿಕೊಳ್ಳಲಾಗಿದೆ.

ಸೆಪ್ಟೆಂಬರ್ 2ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಮುಂಡರಗಿ-ಕೊರ್ಲಹಳ್ಳಿ ರಸ್ತೆಯ ಮಕ್ತುಂಪುರ ಗ್ರಾಮ ದಾಟಿದ ಬಳಿಕ ದುರ್ಗಮ್ಮ ದೇವಿ ದೇವಸ್ಥಾನದ ಸಮೀಪ ಈ ಅಕ್ರಮ ಸಾಗಾಟ ಪತ್ತೆಯಾಗಿದೆ ಎಂದು ಪ್ರಥಮ ಮಾಹಿತಿ ವರದಿಯಲ್ಲಿ ತಿಳಿಸಲಾಗಿದೆ.

ಗುಡದೂರು ಗ್ರಾಮದ ದೊಡ್ಡಬಸಪ್ಪ ವಿರೂಪಣ್ಣ ಕಮತರ ಎಂಬಾತನ ಮಾಲೀಕತ್ವದ ಕೆಎ-01/ಎಎಂ-6176 ಸಂಖ್ಯೆಯ ಟಾಟಾ ಆರು ಚಕ್ರಗಳ ಲಾರಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ಅಕ್ರಮ ಸಾಗಾಟದಲ್ಲಿ ವೀರೇಶ ಬಡಿಗೇರ ಹಾಗೂ ಬೂದಪ್ಪ ಕುರಿ ಸಹ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ದಾಖಲಿಸಲಾಗಿದೆ.

ಲಾರಿಯಲ್ಲಿ ಸುಮಾರು 200 ಕ್ವಿಂಟಾಲ್ ಪಡಿತರ ಅಕ್ಕಿ ಇದ್ದು, ಪ್ರತಿ ಕ್ವಿಂಟಾಲ್‌ಗೆ 2,200 ರೂ.ಗಳಂತೆ ಒಟ್ಟು 4.40 ಲಕ್ಷ ರೂ. ಮೌಲ್ಯದ ಅಕ್ಕಿ ಎಂದು ಅಂದಾಜಿಸಲಾಗಿದೆ.

ಅಕ್ಕಿಯೊಂದಿಗೆ ಲಾರಿಯನ್ನೂ ಪ್ರಕರಣದಲ್ಲಿ ದಾಖಲಿಸಲಾಗಿದ್ದು, ಲಾರಿಯ ಅಂದಾಜು ಮೌಲ್ಯ 6 ಲಕ್ಷ ರೂ. ಎಂದು ತಿಳಿಸಲಾಗಿದೆ. ಹೀಗಾಗಿ ಒಟ್ಟು 10.40 ಲಕ್ಷ ರೂ. ಮೌಲ್ಯದ ಸ್ವತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದೆ.

ಪಡಿತರ ವ್ಯವಸ್ಥೆಯಡಿ ಸಾರ್ವಜನಿಕರಿಗೆ ವಿತರಿಸಬೇಕಾದ ಆಹಾರ ಧಾನ್ಯವನ್ನು ಅನಧಿಕೃತವಾಗಿ ಸಾಗಿಸಲಾಗುತ್ತಿತ್ತು ಎಂಬ ದೂರಿನ ಮೇರೆಗೆ ಆಹಾರ ನಿರೀಕ್ಷಕರಿಂದ ದೂರು ಸಲ್ಲಿಕೆಯಾಗಿದೆ. ಈ ಸಂಬಂಧ ಅಗತ್ಯ ವಸ್ತುಗಳ ಕಾಯ್ದೆ-1955ರ ಕಲಂ 3 ಮತ್ತು 7 ಹಾಗೂ ಪಿಡಿಎಸ್ ನಿಯಂತ್ರಣ ಆದೇಶದ ಕಲಂ 18ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಮುಂಡರಗಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img