ರಾಮನಗರ: ಮಗಳು ಹಾಗೂ ಅಳಿಯನೊಂದಿಗೆ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಚಶೆಟ್ಟಹಳ್ಳಿ ಗ್ರಾಮದ ಶಿವಲಿಂಗಯ್ಯ ಮೃತಪಟ್ಟ ವ್ಯಕ್ತಿ. ಮಗಳು ಹಾಗೂ ಅಳಿಯನೊಂದಿಗೆ ಸಂತೋಷದಿಂದ ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಸಿದು ಬಿದ್ದ ಶಿವಲಿಂಗಯ್ಯ ಅವರು ಮಗಳು ಹಾಗೂ ಅಳಿಯನ ಕಣ್ಣೆದುರಲ್ಲೇ ಮೃತಪಟ್ಟಿದ್ದಾರೆ.
ಊಟದ ವೇಳೆ ಏಕಾಏಕಿ ಸಂಭವಿಸಿದ ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.



