HomeKarnataka Newsರಾಯರ ಭಕ್ತರೇ ಎಚ್ಚರ! ಮಂತ್ರಾಲಯ ಮಠದ ಹೆಸರಿನಲ್ಲಿ ಸೈಬರ್ ವಂಚನೆ

ರಾಯರ ಭಕ್ತರೇ ಎಚ್ಚರ! ಮಂತ್ರಾಲಯ ಮಠದ ಹೆಸರಿನಲ್ಲಿ ಸೈಬರ್ ವಂಚನೆ

For Dai;y Updates Join Our whatsapp Group

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ಚರಿಕೆ ನೀಡಿದ್ದಾರೆ.

ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಸಾಮಾನ್ಯ ದಿನಗಳಲ್ಲೂ ರಾಯರ ಭಕ್ತರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ರೂಂ ಬುಕ್ಕಿಂಗ್, ಪರಿಮಳ ಪ್ರಸಾದ ಆನ್‌ಲೈನ್‌ನಲ್ಲಿ ಒದಗಿಸುವುದು ಹಾಗೂ ದೇಣಿಗೆ ಸಂಗ್ರಹ ಸೇರಿದಂತೆ ವಿವಿಧ ಸೇವೆಗಳ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

ಮಠಕ್ಕೆ ಸಂಬಂಧಿಸಿದ ಯಾವುದೇ ಸೇವೆ ಅಥವಾ ಮಾಹಿತಿ ಅಗತ್ಯವಿದ್ದಲ್ಲಿ ಭಕ್ತರು ನೇರವಾಗಿ ಮಠದ ಕಾರ್ಯಾಲಯ ಅಥವಾ ಆಡಳಿತ ಮಂಡಳಿಯನ್ನು ಸಂಪರ್ಕಿಸುವಂತೆ ಶ್ರೀ ಸುಬುಧೇಂದ್ರ ತೀರ್ಥರು ಸಲಹೆ ನೀಡಿದ್ದಾರೆ.

ದೇಣಿಗೆ ನೀಡುವವರು ಹಾಗೂ ವಿವಿಧ ಸೇವೆಗಳನ್ನು ಪಡೆಯಲು ಮುಂದಾಗುವವರು ಖಾಸಗಿ ವ್ಯಕ್ತಿಗಳು ಅಥವಾ ಅನಧಿಕೃತ ಆನ್‌ಲೈನ್ ವೇದಿಕೆಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ. ಯಾವುದೇ ಅನುಮಾನ ಬಂದರೂ ಮೊದಲು ಮಠದ ಅಧಿಕೃತ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿಸುವಂತೆ ಭಕ್ತರಿಗೆ ಮನವಿ ಮಾಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img