ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ 133 ಮಹಿಳಾ ಕಾರ್ಮಿಕರಿಗೆ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಬೆಂಬಲ ವ್ಯಕ್ತಪಡಿಸಿದರು.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಮಹಿಳಾ ಕಾರ್ಮಿಕರಿಂದ ಮನವಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಪರಿಹಾರ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೆಟಗೇರಿ ನಗರಸಭೆ ಸದಸ್ಯ ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಪೃಥ್ವಿ ಪರಾಪುರ, ಯುವರಾಜ ಬಳ್ಳಾರಿ, ಗೋವಿಂದರಾಜ ಬಳ್ಳಾರಿ, ವಿಜಯ ಕಲ್ಮನಿ, ಮಲಿಕ್ ಸಂಗಾಪುರ, ನಿಂಗಪ್ಪ ದೊಡ್ಡಮನಿ, ಮೈಲಾರಪ್ಪ ಚಳ್ಳಮರ, ಚಂದ್ರು ದೊಡ್ಡಮನಿ, ಉಡಚಪ್ಪ ಹಳ್ಳಿಕೇರಿ, ಪವನ ಬಳ್ಳಾರಿ ಸೇರಿದಂತೆ ಧರಣಿ ನಿರತ ಮಹಿಳಾ ಕಾರ್ಮಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.



