HomeGadag Newsಶಿಕ್ಷಕರ ಸಮ್ಮೇಳನಕ್ಕೆ ಡಾ. ನಿಂಗು ಸೊಲಗಿ ಸರ್ವಾಧ್ಯಕ್ಷ

ಶಿಕ್ಷಕರ ಸಮ್ಮೇಳನಕ್ಕೆ ಡಾ. ನಿಂಗು ಸೊಲಗಿ ಸರ್ವಾಧ್ಯಕ್ಷ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪತ್ತಗಿರಿ ಫೌಂಡೇಶನ್ (ರಿ), ಕಳಸಾಪೂರ–ಗದಗ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶಿಕ್ಷಕರ ಸಮ್ಮೇಳನ ಆಯೋಜಿಸಲಾಗುತ್ತಿದೆ.

ಸಮ್ಮೇಳನದ ಅಂಗವಾಗಿ ರಾಜ್ಯಮಟ್ಟದ ವಿಚಾರ ಸಂಕಿರಣ, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ವರ್ಷದ ಶಿಕ್ಷಕರ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮುಂಡರಗಿಯ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಮಕ್ಕಳ ಸಾಹಿತಿ ಡಾ. ನಿಂಗು ಸೊಲಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಪ್ಪತ್ತಗಿರಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಎಂ. ಇಟಗಿಮಠ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ನಿಂಗು ಸೊಲಗಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗಿರಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಎಂ. ಇಟಗಿಮಠ, ತೋಟಯ್ಯ ಗುಡ್ಡಿಮಠ, ಕಾವ್ಯಾ ಅಂಗಡಿ, ಮಂಜುನಾಥ ಮುಧೋಳ ಹಾಗೂ ಚಂದ್ರಶೇಖರ ಮಜ್ಜಗಿ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img