HomeIndia Newsಸಾಲಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಿದ್ದೀರಿ, ಇನ್ನೂ ಆರ್ಥಿಕ ಅಪರಾಧಿ ಎನ್ನುವುದೇಕೆ?: ಸರ್ಕಾರದ ವಿರುದ್ಧ ವಿಜಯ್...

ಸಾಲಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಿದ್ದೀರಿ, ಇನ್ನೂ ಆರ್ಥಿಕ ಅಪರಾಧಿ ಎನ್ನುವುದೇಕೆ?: ಸರ್ಕಾರದ ವಿರುದ್ಧ ವಿಜಯ್ ಮಲ್ಯ ಪ್ರಶ್ನೆ

For Dai;y Updates Join Our whatsapp Group

ಲಂಡನ್: ಭಾರತದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂಬ ಆರೋಪವನ್ನು ಉದ್ಯಮಿ ವಿಜಯ್ ಮಲ್ಯ ಮತ್ತೊಮ್ಮೆ ತಳ್ಳಿಹಾಕಿದ್ದಾರೆ. ತಾವು 1992ರಿಂದಲೇ ಬ್ರಿಟನ್‌ನ ಖಾಯಂ ನಿವಾಸಿಯಾಗಿದ್ದು, ಭಾರತದಿಂದ ಪರಾರಿಯಾಗಿಲ್ಲ ಎಂದು ಮಲ್ಯ ಹೇಳಿದ್ದಾರೆ. ಅಲ್ಲದೆ, ತಮ್ಮಿಂದ ವಸೂಲಿ ಮಾಡಿರುವ ಹಣದ ಪ್ರಮಾಣವನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧವೂ ಪ್ರಶ್ನೆಗಳನ್ನು ಎತ್ತಿದ್ದಾರೆ.

ಎಕ್ಸ್ ಖಾತೆಯಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ಮಾಹಿತಿಯನ್ನು ಪ್ರಸ್ತಾಪಿಸಿರುವ ಮಲ್ಯ, 2021ರ ವೇಳೆಗೆ ತಮ್ಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಒಟ್ಟು ₹14,131.60 ಕೋಟಿ ವಸೂಲಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬ್ಯಾಂಕುಗಳಿಗೆ ಬರಬೇಕಿದ್ದ ಅಸಲು ಸಾಲದ ಮೊತ್ತ ಸುಮಾರು ₹6,203 ಕೋಟಿ ಮಾತ್ರವಾಗಿತ್ತು. ಹೀಗಿರುವಾಗ ಸಾಲಕ್ಕಿಂತ ಹೆಚ್ಚಿನ ಹಣವನ್ನು ಸರ್ಕಾರ ವಸೂಲಿ ಮಾಡಿದೆ. ಆದ್ದರಿಂದ ಹೆಚ್ಚುವರಿ ಮೊತ್ತವನ್ನು ಸರ್ಕಾರವೇ ತನಗೆ ಪಾವತಿಸಬೇಕು ಎಂದು ಮಲ್ಯ ವಾದಿಸಿದ್ದಾರೆ.

ಮಲ್ಯ ಅವರ ಹೇಳಿಕೆಗಳ ನಡುವೆಯೇ ಬಾಂಬೆ ಹೈಕೋರ್ಟ್‌ ಪ್ರಕರಣವೊಂದರಲ್ಲಿ ಅವರು ಉದ್ದೇಶಪೂರ್ವಕವಾಗಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದೆ.

ನೌಕರರ ವೇತನ ಪಾವತಿ ವಿಚಾರ

ಕಿಂಗ್‌ಫಿಷರ್ ಏರ್‌ಲೈನ್ಸ್‌ನ ನೌಕರರಿಗೆ ಬಾಕಿ ವೇತನ ಪಾವತಿಸಲು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದ್ದ ನಿಧಿಯಿಂದಲೇ ₹350 ಕೋಟಿಗೂ ಅಧಿಕ ಹಣ ಬಿಡುಗಡೆ ಮಾಡಿದೆ ಎಂದು ಮಲ್ಯ ಹೇಳಿದ್ದಾರೆ.

ತಮ್ಮ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದರಿಂದ ನೌಕರರಿಗೆ ತಾವೇ ಬಾಕಿ ವೇತನ ಪಾವತಿಸಲು ಸಾಧ್ಯವಾಗಲಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

‘ಭಾರತಕ್ಕೆ ಬಾರದಿರುವುದು ಪಲಾಯನವಲ್ಲ’

1992ರಿಂದಲೂ ತಾವು ಯುನೈಟೆಡ್ ಕಿಂಗ್‌ಡಂನ ಖಾಯಂ ನಿವಾಸಿಯಾಗಿದ್ದೇನೆ ಎಂದು ಮಲ್ಯ ಹೇಳಿದ್ದಾರೆ. ಸ್ಥಳೀಯ ಕಾನೂನು ನಿಯಮಗಳ ಕಾರಣದಿಂದ ಬ್ರಿಟನ್‌ ತೊರೆದು ತೆರಳಲು ತಮ್ಮ ಮೇಲೆ ನಿರ್ಬಂಧಗಳಿವೆ. ಹೀಗಾಗಿ ಭಾರತಕ್ಕೆ ಮರಳದೇ ಇರುವುದನ್ನು ಪಲಾಯನ ಎಂದು ಕರೆಯಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ವಿರುದ್ಧದ ಆರ್ಥಿಕ ಅಪರಾಧಿ ಎಂಬ ಆರೋಪ ಹಾಗೂ ಭಾರತದಿಂದ ಪರಾರಿಯಾಗಿರುವ ವ್ಯಕ್ತಿ ಎಂಬ ಆರೋಪವನ್ನು ಮಲ್ಯ ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಅವರ ಆಸ್ತಿಗಳ ಜಪ್ತಿ, ಸಾಲ ವಸೂಲಿ ಹಾಗೂ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img