ಬೆಂಗಳೂರು: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಪ್ರಶಂಸಿಸಿದ್ದಾರೆ.
ಕಾರ್ಮಿಕ ಪ್ರಕರಣವೊಂದರ ವಿಚಾರಣೆ ವೇಳೆ ಸಿಎಂ ಭೇಟಿಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ಯಾರಾದರೂ ಇದನ್ನು ಗಿಮಿಕ್ ಎಂದು ಕರೆಯಬಹುದು. ಆದರೆ ಇದು ‘ಗ್ರೇಟ್ ಜಾಬ್’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ಭೇಟಿ ವೇಳೆ ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ಹಾಗೂ ಶುಂಠಿ ದರಗಳನ್ನು ಪರಿಶೀಲಿಸಿದ್ದರು. ಅಲ್ಲದೆ ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರೊಂದಿಗೆ ಮಾತನಾಡಿದ್ದನ್ನು ನ್ಯಾಯಮೂರ್ತಿಗಳು ವಿಚಾರಣೆ ವೇಳೆ ಉಲ್ಲೇಖಿಸಿದ್ದಾರೆ.
ಎಪಿಎಂಸಿ ಮಳಿಗೆಗಳು ಕೆಲವರ ಹೆಸರಿನಲ್ಲಿದ್ದು, ಬೇರೆಯವರು ಅಲ್ಲಿ ಬಾಡಿಗೆದಾರರಾಗಿ ವ್ಯವಹಾರ ನಡೆಸುತ್ತಿರುವ ಪರಿಸ್ಥಿತಿಯ ಬಗ್ಗೆಯೂ ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ್ದಾರೆ.



