ರಕ್ತದ ಮಡುವಿನಲ್ಲಿ ಆರ್ ಟಿ ಓ ಏಜೆಂಟನ ಶವ ಪತ್ತೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಆರ್ ಟಿ ಓ ಏಜೆಂಟ್ ನೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಜರುಗಿದೆ.

ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು-ಪೇಠಾಲೂರು ಮಧ್ಯೆ ಈ ಕೃತ್ಯ ಬೆಳಕಿಗೆ ಬಂದಿದೆ.

ಗದಗನ ಗಂಗಿಮಡಿ ಆಶ್ರಯ ಕಾಲೋನಿಯ ಮಾರುತಿ ರಾಮಣ್ಣ ಅಂಕಲಗಿ (36) ಎಂಬಾತನೇ ರಕ್ತದ ಮಡುವಿನಲ್ಲಿ ಶವವಾಗಿ ದೊರತಿರುವುದು ತಿಳಿದು ಬಂದಿದೆ.

ಮಾರುತಿ ಆರ್ ಟಿ ಓ ಕಛೇರಿಯಲ್ಲಿ ಏಜೆಂಟ್ ನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೃತನ ಬಲಹಣಿಯ ಮೇಲೆ ತೀವ್ರ ಸ್ವರೂಪದ ಗಾಯವಾಗಿದ್ದು, ತಲೆಯ ಹಿಂಭಾಗದಲ್ಲಿ ಕೂಡ ಗಾಯವಾಗಿ ತೀವ್ರ ರಕ್ತಸ್ರಾವ ಆಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸುದ್ದಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಕರಣ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

LEAVE A REPLY

Please enter your comment!
Please enter your name here