ವಿಜಯಸಾಕ್ಷಿ ಸುದ್ದಿ, ಗದಗ
Advertisement
ಮಂಗಳವಾರ ನಸುಕಿನಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಮಳೆಯ ಹಿನ್ನೆಲೆಯಲ್ಲಿ ಇಂದು ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ವಿಜಯಸಾಕ್ಷಿಗೆ ತಿಳಿಸಿದರು.
ಹವಾಮಾನ ಇಲಾಖೆಯ ವರದಿ ಪ್ರಕಾರ ಇನ್ನೂ ಎರಡು ಮೂರು ದಿನಗಳ ಕಾಲ ಮಳೆಯಾಗುವ ಸೂಚನೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಕೋರಿದೆ.