HomeGadag Newsಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸಗಳಿಸಿ; ಜಿ ಎಸ್ ಪಾಟೀಲ್

ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸಗಳಿಸಿ; ಜಿ ಎಸ್ ಪಾಟೀಲ್

Spread the love

ವಿಜಯಸಾಕ್ಷಿ ಸುದ್ದಿ, ರೋಣ

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಅವರು ಸೋಮವಾರ ತಮ್ಮ ನಿವಾಸದಲ್ಲಿ ಕೊತಬಾಳ ಗ್ರಾಪಂಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದರು.

ಕೊತಬಾಳ ಸೇರಿದಂತೆ ಗ್ರಾಪಂಗೆ ಒಳಪಡುವ ಗ್ರಾಮಗಳ ಜನ ಸಮುದಾಯ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರನ್ನಾಗಿ ಮಾಡುವ ಮೂಲಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಿದ್ದಾರೆ. ಹೀಗಾಗಿ ನೂತವಾಗಿ ಆಯ್ಕೆಗೊಂಡ ಅಧ್ಯಕ್ಷರು, ಉಪಾದ್ಯಕ್ಷರು ಹಾಗೂ ಸದಸ್ಯರು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಕಾಳಿಂಗಪ್ಪ ಉಪ್ಪಾರ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಕಮಲವ್ವ ಕೋಡಿಕೊಪ್ಪದ ಅವರನ್ನು ಸನ್ಮಾನಿಸಿದರು.

ಸೋಮವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ೮ ಸದಸ್ಯರಿಂದ ನಾಮಪತ್ರ ಸಲ್ಲಿಕೆಯಾಗಿ ಕೊನೆಗೆ ೭ ಸದಸ್ಯರು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದುಕೊಂಡಿದ್ದರು. ಕೊನೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಳಿಂಗಪ್ಪ ಉಪ್ಪಾರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಮಲವ್ವ ಕೋಡಿಕೊಪ್ಪದ ಅವಿರೋಧವಾಗಿ ಅಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಾಪಂ ಇಒ ಸಂತೋಷ ಪಾಟೀಲ ಘೋಷಿಸಿದರು.

ವಿ.ಆರ್.ಗುಡಿಸಾಗರ, ತಾಪಂ ಮಾಜಿ ಸದಸ್ಯ ಶಿದ್ಲಿಂಗಪ್ಪ ಯಾಳಗಿ, ಗ್ರಾಪಂ ಸದಸ್ಯರಾದ ವೀರಣ್ಣ ಯಾಳಗಿ, ಫಕ್ಕೀರಪ್ಪ ಗುಳಗುಳಿ, ಶರಣಪ್ಪ ದೊಡ್ಮನಿ, ಪಾರ್ವತಿ ಬಿಸಾಟಿ, ಸುರೇಶ ಸೇರಿದಂತೆ ಅನೇಕ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!