ವಿಜಯಸಾಕ್ಷಿ ಸುದ್ದಿ, ಗದಗ
ಮನೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ ಅಗ್ನಿಶಾಮಕ ಠಾಣೆ ಮೇಲೆ ಲೋಕಾಯುಕ್ತರ ದಾಳಿ; ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ
ಗದಗ ನಗರದ ವಕೀಲ ಚಾಳ ನಿವಾಸಿ ಕನಕಪ್ಪ ಎಂಬಾತ ಮನೆಯಲ್ಲಿಯೇ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಅಬಕಾರಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಬಂಧಿತನಿಂದ ಹತ್ತು ಸಾವಿರ ರೂ. ಮೌಲ್ಯದ 600 ಗ್ರಾಮ ತೂಕದ ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಡಿಸಿ ಭರತೇಶ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಈ ದಾಳಿ ಮಾಡಿದ್ದು, ಎನ್ ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.