ವಿಜಯಸಾಕ್ಷಿ ಸುದ್ದಿ, ರಾಯಚೂರು
Advertisement
ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಪರಿಣಾಮವಾಗಿ ಮಗು ಸಮೇತ ದಂಪತಿ ಮೃತಪಟ್ಟ ದುರ್ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.
ಪರಮೇಶ್ (43), ಜಯಮ್ಮ(38) ಐದು ವರ್ಷದ ಮಗು ಭರತ್ ಮೃತಪಟ್ಟ ದುರ್ಧೈವಿಗಳು ಎಂದು ಹೇಳಲಾಗಿದೆ.
ಎಂದಿನಂತೆ ಮನೆಯಲ್ಲಿ ಮಲಗಿದ್ದಾಗ ಬೆಳಗಿನ ಜಾವ ಗೋಡೆ ಕುಸಿದಿದೆ. ದಂಪತಿ ಸ್ಥಳದಲ್ಲಿಯೇ ಮೃತಪಟ್ಟರೆ, ಮಗು ಭರತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನಿಗಿದೆ.
ಮೃತರ ಸಂಬಂಧಿಕರ ಆಕ್ರಂಧನ ಮುಗಿಲ ಮುಟ್ಟಿದ್ದು, ಸುದ್ದಿ ತಿಳಿದ ಮಾನ್ವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.