ವಿಜಯಸಾಕ್ಷಿ ಸುದ್ದಿ, ಗದಗ
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯವು ಸುವರ್ಣ ಕಂಬಿ ಅವರು ಸಲ್ಲಿಸಿದ್ದ ‘ಕವರೇಜ್ ಆಫ್ ದಲಿತ್ ಇಶ್ಯೂಸ್ ಇನ್ ಕನ್ನಡ ಆಂಡ್ ಇಂಗ್ಲೀಷ್ ನ್ಯೂಸ್ ಪೇಪರ್ಸ್’ ಕುರಿತಾದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಗದಗ ಜಿಲ್ಲೆಯ ಹುಲಕೋಟಿ ನಿವಾಸಿಯಾಗಿರುವ ಸುವರ್ಣ ಕಂಬಿಯವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರಗೌಡ ಕಾಕಡೆಯವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.
ಡಾಕ್ಟರೇಟ್ ಪದವಿ ಪಡೆದಿರುವ ಸುವರ್ಣ ಕಂಬಿಯವರನ್ನು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ, ಕುಲಸಚಿವ ಪ್ರೊ. ಬಿ.ಎಸ್. ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್.ಕೆ. ಅಭಿನಂದಿಸಿದ್ದಾರೆ.



