ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
Advertisement
ನಾಯಿ ಉಳಿಸಲು ಹೋಗಿ ಕಾರು ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮವಾಗಿ ಇಬ್ಬರು ಮಹಿಳೆಯರು ಮೃತಪಟ್ಟು, ಓರ್ವ ಗಾಯಗೊಂಡ ದುರ್ಘಟನೆ ಜರುಗಿದೆ.
ಜಿಲ್ಲೆಯ ಚಿಕ್ಕಬೆನ್ನೂರು ಸಮೀಪ ನಡೆದ ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಮಾನ್ಸಿ (38) ಹಾಗೂ ಉಜ್ವಲ್ ಬಾರ್ವಿ (45) ಮೃತಪಟ್ಟಿದ್ದು, ಸಚಿನ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿಕೊಂಡು ವಾಪಾಸು ಮಹಾರಾಷ್ಟ್ರದತ್ತ ತೆರಳುವಾಗ ಈ ಘಟನೆ ನಡೆದಿದೆ.
ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.