ಗ್ರಾಹಕರು ಕೊಟ್ಟ ಹಣ ಸ್ವಂತಕ್ಕೆ…….
ವಿಜಯಸಾಕ್ಷಿ ಸುದ್ದಿ, ಗದಗ/ಶಿರಹಟ್ಟಿ
ಗ್ರಾಹಕರು ಖಾತೆಗಳಿಗೆ ಜಮಾ ಮಾಡಲು ಕೊಟ್ಟ ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡದೆ ಸ್ವಂತಕ್ಕೆ ಬಳಿಸಿಕೊಂಡ ಪೋಸ್ಟ್ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ಸುಗ್ನಳ್ಳಿ ಗ್ರಾಮದ ಗ್ರಾಮೀಣ ಶಾಖಾ ಅಂಚೆ ಪಾಲಕ ಅಂತ ಕೆಲಸ ಮಾಡುತ್ತಿದ್ದ ರಣತೂರ ಗ್ರಾಮದ ವಿನೋದಕುಮಾರ್ ಎಚ್ ಹೆಬ್ಬಾಳ ಎಂಬುವರೇ ಗ್ರಾಹಕರಿಗೆ ಹಾಗೂ ಸರಕಾರಕ್ಕೆ ಮೋಸ ಮಾಡಿದ್ದಾರೆ ಎನ್ನಲಾಗಿದೆ.
ಆರೋಪಿತ ಪೋಸ್ಟ್ ಮಾಸ್ಟರ್ ವಿನೋದಕುಮಾರ್ , 2017ರಿಂದ ಸುಗ್ನಳ್ಳಿ ಗ್ರಾಮದಲ್ಲಿ ಅಂಚೆ ಪಾಲಕ ಎಂದು ಕಾರ್ಯನಿರ್ವಹಿಸುತ್ತಿದ್ದಾನೆ.
21-10-2021ರಿಂದ 03-03-2022ರ ನಡುವಿನ ಅವಧಿಯಲ್ಲಿ ಗ್ರಾಹಕರು ತಮ್ಮ ಖಾತೆಗಳಿಗೆ ಹಣ ತುಂಬಲು ಕೊಟ್ಟ ಹಣವನ್ನು ತನ್ನ ಸ್ವಂತಕ್ಕೆ ಬಳಸಿಕೊಂಡಿದ್ದಾನೆ.
ಗ್ರಾಹಕರ ಪಾಸ್ ಬುಕ್ ನಲ್ಲಿ ಮಾತ್ರ ಅವರು ಕೊಟ್ಟ ಹಣದ ಮೊತ್ತವನ್ನು ದಾಖಲು ಮಾಡಿದ್ದು, ತನ್ನದೊಂದು ಸಣ್ಣದೊಂದು ಸಹಿ ಮಾಡಿದ್ದಾನೆ.
ಒಟ್ಟು ಮೂರು ಜನ ಗ್ರಾಹಕರಿಗೆ ಸೇರಿದ 63,300ರೂ. ಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪಿ ಪೋಸ್ಟ್ ಮಾಸ್ಟರ್ ವಿರುದ್ಧ ಗದಗ ಹೆಡ್ ಪೋಸ್ಟ್ ನ ಅಧಿಕಾರಿ ಎಮ್. ಜಿ ಕರಣ ಎಂಬುವರು ಶಿರಹಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, 0015/2023-ಐಪಿಸಿ 1860-(u/s-409,420,465,468 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.