ಪೊಲೀಸರಿಂದ ಆರೋಪಿ ಮೌನೇಶ್ವರ ಬಂಧನ....
ಪತ್ನಿಯ ಶೀಲದ ಬಗ್ಗೆ ಸಂಶಯಪಟ್ಟ ಪಾಪಿ ಪತಿಯೊಬ್ಬ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾಶ್ರೀ (29) ಕೋಲೆಗೀಡಾದ ನತದೃಷ್ಟ ಮಹಿಳೆ.
ಪಾಪಿ ಪತಿ ಮೌನೇಶ್ವರ ಆಡಿನ ಈ ಕೃತ್ಯ ಎಸೆಗಿದ ಆರೋಪಿಯಾಗಿದ್ದು, ಪೊಲೀಸರ ಅತಿಥಿಯಾಗಿದ್ದಾನೆ.
ಕಳೆದ 7-8 ವರ್ಷಗಳ ಹಿಂದೆ ವಿದ್ಯಾಶ್ರೀ ಹಾಗೂ ಮೌನೇಶ್ವರ ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ದಂಪತಿಗಳಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳಲ್ಲಿ ಬರುಬರುತ್ತಾ ಮೃತ ವಿದ್ಯಾಶ್ರೀಯ ಶೀಲದ ಬಗ್ಗೆ ಸಂಶಯಪಡುತ್ತಾ ಬಂದ ಮೌನೇಶ್ವರ, ಮನೆಯಲ್ಲಿ ಆಗಾಗ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಅದು ಮಂಗಳವಾರ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕೊಡಲಿಯಿಂದ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ.

ತೀವ್ರ ರಕ್ತಸ್ರಾವವಾಗಿ ವಿದ್ಯಾಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸುದ್ದಿ ತಿಳಿದು ಗಜೇಂದ್ರಗಡ ಪಿಎಸ್ಐ ರಾಘವೇಂದ್ರ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.