ಶಿರಹಟ್ಟಿ ಪೊಲೀಸರ ಕಾರ್ಯಾಚರಣೆ…..
Advertisement
ವಿಜಯಸಾಕ್ಷಿ ಸುದ್ದಿ, ಗದಗ
ಸಾರ್ವಜನಿಕರಿಂದ ಹಣ ಪಡೆದು ಕಲ್ಯಾಣಿ ಮಟಕಾ ಎಂಬ ಜೂಜಾಟದಲ್ಲಿ ತೊಡಗಿದ್ದ ವ್ಯಾಪಾರಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ವಿರೂಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪಶೆಟ್ಟರ್ ಎಂಬುವವರೇ ಬಂಧಿತ ಆರೋಪಿ.
ಫೆ.20 ರಂದು ಶಿರಹಟ್ಟಿ ಪಟ್ಟಣದ ಗಾಂಧಿ ಸರ್ಕಲ್ ಬಳಿ ಸಾರ್ವಜನಿಕರಿಂದ ಹಣ ಹಚ್ಚಿಸಿಕೊಂಡು ಕಲ್ಯಾಣಿ ಮಟಕಾ ಎಂಬ ಜೂಜಾಟದಲ್ಲಿ ತೊಡಗಿದ್ದಾಗ ಶಿರಹಟ್ಟಿ ಪಿಎಸ್ಐ ಈರಪ್ಪ ಎಚ್ ರಿತ್ತಿ ಬಂಧಿಸಿದ್ದಾರೆ.

ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಯ್ಯಾಕ್ಟ್ 1963(u/s-78(3) 0024/2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.