HomeGadag Newsಪೋಸ್ಟ್ ಮಾಸ್ಟರ್ ಚೀಟಿಂಗ್ ಕೇಸ್; ಸಾಕ್ಷಿ, ಪುರಾವೆ ಸಂಗ್ರಹಿಸುತ್ತಿರುವ ಪೊಲೀಸರು

ಪೋಸ್ಟ್ ಮಾಸ್ಟರ್ ಚೀಟಿಂಗ್ ಕೇಸ್; ಸಾಕ್ಷಿ, ಪುರಾವೆ ಸಂಗ್ರಹಿಸುತ್ತಿರುವ ಪೊಲೀಸರು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ/ ಶಿರಹಟ್ಟಿ

ಗ್ರಾಹಕರ ಖಾತೆಗೆ ಜಮಾ ಮಾಡಲು ಕೊಟ್ಟ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ಪೋಸ್ಟ್ ಮಾಸ್ಟರ್ ವಿರುದ್ಧ ಶಿರಹಟ್ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಶಿರಹಟ್ಟಿ ತಾಲೂಕಿನ ಸುಗ್ನಳ್ಳಿ ಗ್ರಾಮದ ಗ್ರಾಮೀಣ ಶಾಖಾ ಅಂಚೆ ಪಾಲಕ ಎಂದು ಕಾರ್ಯನಿರ್ವಹಿಸುತ್ತಿದ್ದ ರಣತೂರ ಗ್ರಾಮದ ವಿನೋದಕುಮಾರ್ ಎಚ್. ಹೆಬ್ಬಾಳ ಎಂಬುವರು ಗ್ರಾಹಕರ ಹಣ ದುರ್ಬಳಕೆ ಮಾಡಿಕೊಂಡಿದ್ದರು.

21-10-2021ರಿಂದ 03-03-2022 ರ ಅವಧಿಯಲ್ಲಿ ಮೂರು ಜನ ಗ್ರಾಹಕರ 63,300 ರೂ.ಗಳನ್ನು ಸ್ವಂತಕ್ಕೆ ಬಳಸಿಕೊಂಡು ಆರೋಪ ಕೇಳಿ ಬಂದಿತ್ತು.

ಈ ಕುರಿತು ಪೋಸ್ಟ್ ಮಾಸ್ಟರ್ ವಿನೋದಕುಮಾರ್ ವಿರುದ್ಧ ಗದಗ ಹೆಡ್ ಪೋಸ್ಟ್‌ ನ ಅಧಿಕಾರಿ ಎಮ್.ಜಿ.ಕರಣ ಎಂಬುವರು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲು ಮಾಡಿಕೊಂಡ ಶಿರಹಟ್ಟಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಶಿರಹಟ್ಟಿ ಪೊಲೀಸರು, ಗ್ರಾಹಕರಿಗೆ ಸೇರಿದ ಹಣ ದುರ್ಬಳಕೆ ಮಾಡಿಕೊಂಡಿರುವ
ಪೋಸ್ಟ್ ಮಾಸ್ಟರ್ ವಿರುದ್ಧ ತನಿಖೆ ಪ್ರಗತಿಯಲ್ಲಿದ್ದು, ಸಾಕ್ಷಿ, ಪುರಾವೆಗಳನ್ನು ಸಂಗ್ರಹ ಮಾಡಲಾಗುತ್ತಿದ್ದು, ಸದ್ಯದಲ್ಲಿಯೇ ತನಿಖಾ ಕಾರ್ಯ ಪೂರ್ಣಗೊಳಿಸಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಪಿಎಸ್ಐ ಈರಪ್ಪ. ಹ ರಿತ್ತಿ ಮಾಹಿತಿ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img